ಗಾದೆಗಳ ಸಂಗ್ರಹ

ಗಾದೆಗಳ  ಲೋಕ  click Here
ಗಾದೆಗಳ ಸಂಗ್ರಹ

೧. ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
೨. ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
೩. ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
೪. ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
೫. ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
೬. ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
೭. ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
೮. ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
೯. ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
೧೦. ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
೧೧. ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
೧೨. ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
೧೩. ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
೧೪. ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
೧೫. ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
೧೬. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
೧೭. ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
೧೮. ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
೧೯. ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
೨೦. ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
೨೧. ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
೨೨. ಮೃತ್ಯು ಬಂದ ಮೇಲೆ ವೈದ್ಯ ಬಂದ.
೨೩. ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
೨೪. ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
೨೫. ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
೨೬. ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
೨೭. ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
೨೮. ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
೨೯. ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
೩೦. ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
೩೧. ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
೩೨. ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
೩೩. ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
೩೪. ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
೩೫. ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
೩೬. ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
೩೭. ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
೩೮. ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
೩೯. ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
೪೦. ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
೪೧. ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
೪೨. ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
೪೩. ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
೪೪. ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
೪೫. ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
೪೬. ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
೪೭. ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
೪೮. ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
೪೯. ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
೫೦. ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
೫೧. ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
೫೨. ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
೫೩. ಬೇಸರವಿರಬಾರದು, ಅವಸರ ಮಾಡಬಾರದು.
೫೪. ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
೫೫. ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
೫೬. ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
೫೭. ಗದ್ದೆ ಸುಟ್ಟರೂ ಹಾಳಾಗದು ಗಾದೆ.
೫೮. ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
೫೯. ಮಾಟ ಮಾಡಿದೋನ ಮನೆ ಹಾಳು.
೬೦. ಒಬ್ಬರ ಕೂಳು ಇನ್ನೊಬ್ಬರ ಕುತ್ತು.
೬೧. ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
೬೨. ಹೊಳೆಯುವುದೆಲ್ಲಾ ಚಿನ್ನವಲ್ಲ.
೬೩. ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
೬೪. ಬರಿಗೈಯವರ ಬಡಿವಾರ ಬಹಳ.
೬೫. ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
೬೬. ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
೬೭. ಅರೆಗೊಡದ ಅಬ್ಬರವೇ ಬಹಳ.
೬೮. ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
೬೯. ಆಪತ್ತಿಗಾದವನೇ ನಿಜವಾದ ಗೆಳೆಯ.
೭೦. ಇಂದಿನ ಸೋಲು ನಾಳಿನ ಗೆಲುವು.
೭೧. ಧೈರ್ಯವಿದ್ದವನಿಗೆ ದೈವವೂ ಅನುಕೂಲ.
೭೨. ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
೭೩. ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
೭೪. ಉತ್ತಮವಾದ ನಗು ನೇಸರನ ಮಗು.
೭೫. ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
೭೬. ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
೭೭. ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
೭೮. ಉದ್ದುದ್ದ ಮಾತಿನವರ ಮೊಳಕೈ ಮೊಂಡ.
೭೯. ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ.
೮೦. ನೋಡಿ ನಡೆದವರಿಗೆ ಕೇಡಿಲ್ಲ.
೮೧. ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
೮೨. ಚಿಂತೆ ಮಾಡಿದರೆ ಸಂತೆ ಸಾಗೀತೆ?
೮೩. ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
೮೪. ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
೮೫. ತಾಯಿ ಬೇಕು ಇಲ್ಲವೇ ಬಾಯಿ ಬೇಕು.
೮೬. ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
೮೭. ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
೮೮. ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
೮೯. ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
೯೦. ಮಂತ್ರಕ್ಕಿಂತ ಉಗುಳೇ ಹೆಚ್ಚು.
೯೧. ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
೯೨. ಎಡಗಣ್ಣು ಹೊಡೆದರೆ ನಾರಿಗೆ ಶುಭ.
೯೩. ಊಟವೆಂದರೆ ಊರು ಬಿಟ್ಟುಹೋದಂತೆ.
೯೪. ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
೯೫. ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
೯೬. ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
೯೭. ಕಣ್ಣಿಗೂ ಮೂಗಿಗೂ ಮೂರು ಗಾವುದ.
೯೮. ಕಲಹವೇ ಕೇಡಿಗೆ ಮೂಲ.
೯೯. ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
೧೦೦. ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
೧೦೧. ಮಾಡಿದ ರಾಗಿ ಕೊಟ್ರೂ ಮೂರ್ಖನ ಸಹವಾಸ ಬೇಡವೆಂದಂತೆ.
೧೦೨. ಲೋಕ ತಿಳೀಬೇಕು ಲೆಕ್ಕ ಕಲೀಬೇಕು.
೧೦೩. ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ.
೧೦೪. ಹಲ್ಲಿರುವ ತನಕ ಊಟ ಕಣ್ಣಿರುವ ತನಕ ನೋಟ.
೧೦೫. ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು.
೧೦೬. ಭಾವಿಸಿದರೆ ಬಳಗ, ಕೂಡಿಸಿದರೆ ಕಾಸು.
೧೦೭. ಭಾಷೆ ಕೊಟ್ಟವನು ಪೋಷಣೆ ಮಾಡನೇ?
೧೦೮. ಭಾಷೆ ತಿಳಿಯದಿದ್ದರೂ ಹಾಸ್ಯಕ್ಕೆ ಕಡಿಮೆಯಿಲ್ಲ.
೧೦೯. ಭಿಕಾರಿಯಾದವ ಕಾಶಿಗೆ ಹೋದರೂ, ಭಿಕ್ಷಾನ್ನವಲ್ಲದೆ ಪಕ್ವಾನ್ನ ಉಂಡಾನೇ?
೧೧೦. ಮಣದಷ್ಟು ಮಾತಿಗಿಂತ ಕಣದಷ್ಟು ಕೆಲಸ ಲೇಸು.
೧೧೧. ಮಳೆ ನೀರನ್ನು ಬಿಟ್ಟು ಮಂಜಿನ ನೀರಿಗೆ ಕೈಯೊಡ್ಡಿದ ಹಾಗೆ.
೧೧೨. ದುಡಿಯೋ ತನಕ ಮಡದಿ.
೧೧೩. ದೂರವಿದ್ದ ಮಗನಿಗೂ, ಹತ್ತಿರವಿದ್ದ ಮಗನಿಗೂ ಸರಿಬಾರದು.
೧೧೪. ದೊಂಬರಾಟ ಆಡಬಹುದು ಮಕ್ಕಳಾಟ ಆಡೊಕ್ಕಾಗಲ್ಲ.
೧೧೫. ನನಗೆ ನಿನಗೆ ಹಿತ ಇಲ್ಲ, ನಿನ್ನ ಬಿಟ್ಟು ನನಗೆ ಗತಿ ಇಲ್ಲ ಎಂದಂತೆ.
೧೧೬. ನೆಂಟ್ರು ಮನೆಗೆ ಮೂಲ, ಕುಂಟೆತ್ತು ಹೊಲಕ್ಕೆ ಮೂಲ.
೧೧೭. ನರಗುಂದಕ್ಕೆ ಹೊದರೆ ಕುರು ತಪ್ಪೀತೆ?
೧೧೮. ನಾಮವಿದ್ದವನಿಗೆ ಕಾಮ ಕಡಿಮೆಯೇ?
೧೧೯. ಹಲ್ಲಿ ಶಕುನ ಕೇಳಿ ಕಲ್ಲಿಂದ ಹೊಡೆಸಿಕೊಂಡಂತೆ.
೧೨೦. ಸಾಲಗಾರನ ಹೆಂಡತಿ ಶೋಕಿಮಾಡಿದರೇನು?
೧೨೧. ವೈಕುಂಠಕ್ಕೆ ಹೋಗಲಿಕ್ಕೆ ಕುಂಟು ದಾಸಯ್ಯನ ಮಧ್ಯಸ್ತಿಕೆಯೇ?
೧೨೨. ಮೂರು ಕಾಸಿನ ಮಾಂಸವಿಲ್ಲದಿದ್ದರೂ, ಮಾತು ಮಾತ್ರ ಜೋರು.
೧೨೩. ರೊಕ್ಕ ಕೊಟ್ಟು ರಟ್ಟೆ ಮುರಿಸಿಕೊಂಡಂತೆ.
೧೨೪. ಜಾತಿ ನೀತಿಯಿಲ್ಲ, ಮಾರಿಗೆ ಕರುಣೆ ಇಲ್ಲ.
೧೨೫. ಹೂಡಿದರೆ ಒಲೆ, ಮಡಿದರೆ ಮನೆ.
೧೨೬. ಹತ್ತು ಜನರ ಹುಲ್ಲು ಕಡ್ಡಿ ಒಬ್ಬನಿಗೆ ತಲೆ ಹೊರೆ.
೧೨೭. ಪಂಗಡವಾದವ ಸಂಗಡ ಬಂದಾನೆ?
೧೨೮. ಅಗ್ನಿಗೆ ತಂಪುಂಟೆ, ವಿಷಕ್ಕೆ ರುಚಿಯುಂಟೆ, ದಾರಿಕೋರನಿಗೆ ಧರ್ಮವುಂಟೆ?
೧೨೯. ಬಸವನ ಹಿಂದೆ ಬಾಲ, ಲಗ್ನದ ಹಿಂದೆ ಸಾಲ.
೧೩೦. ತುಪ್ಪ ತಿಂದ ಮಾತಿಗಷ್ಟು ತಪ್ಪು ಮಾತು ಬಂತು.
೧೩೧. ತೇರಾದ ಮೇಲೆ ಜಾತ್ರೆ ಸೇರಿತು.
೧೩೨. ಆಸೆಗೆ ತಕ್ಕ ಪರಿಶ್ರಮ ಬೇಕು.
೧೩೩. ಎಲ್ಲರಿಗೂ ಹಿಡಿಸುವ ಸಂಪ್ರದಾಯ ಯಾವುದೂ ಇಲ್ಲ.
೧೩೪. ಏನಾದರೂ ಆಗು ಮೊದಲು ಮಾನವನಾಗು.
೧೩೫. ಬಕ್ಕಳ ಹೊನ್ನಿದ್ದರೆ ಊರೆಲ್ಲಾ ನೆಂಟರು.
೧೩೬. ಕಷ್ಟಗಳು ಹೇಳದೆ ಕೇಳದೆ ಬರೋ ನೆಂಟರ ಹಾಗೆ.
೧೩೭. ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು.
೧೩೮. ಗಣೇಶನ್ನ ಮಾಡು ಅಂದ್ರೆ ಅವರ ಅಪ್ಪನ ಮಾಡಿದನಂತೆ.
೧೩೯. ಜ್ಞಾನಿ ಬಂದರೆ ಗೌರವಿಸು, ಹೀನ ಬಂದರೆ ತ್ಯಜಿಸು.
೧೪೦. ಚಿನ್ನದ ಸೂಜಿ ಅಂತ ಕಣ್ಣು ಚುಚ್ಚಿಕೊಂಡಾರೆ?
೧೪೧. ಟೊಳ್ಳು ಮಾತು ಸುಳ್ಳಿಗಿಂತ ಕಡೆ.
೧೪೨. ಠಕ್ಕು ಇರುವವನಿಗೆ ಠಿಕಾಣಿ ಸಿಗದು.
೧೪೩. ತೂಕ ಸರಿಯಿದ್ದರೆ ವ್ಯಾಪಾರ.
೧೪೪. ನಡೆದಷ್ಟು ನೆಲ, ಪಡೆದಷ್ಟು ಫಲ.
೧೪೫. ಮುಳ್ಳು ಬಿತ್ತಿದವನಿಗೆ ನೀನು ಹೂಬಿತ್ತು.
೧೪೬. ಪುಷ್ಪ ಡೊಂಕಾದರೇನು, ಪರಿಮಳ ಡೊಂಕೇ?
೧೪೭. ಬುದ್ಧಿಯಿಲ್ಲದವನ ಐಶ್ವರ್ಯ, ಕಡಿವಾಣ ಇಲ್ಲದ ಕುದುರೆಯಂತೆ.
೧೪೮. ರಸ್ತೇಲಿ ಕುತ್ಕೊಂಡು ಗಳಗಳನೆ ಅತ್ತರೆ ಹೋದ ಪ್ರಾಯ ಬಂದೀತೆ?
೧೪೯. ವೈರತ್ವ ನಾಶಕ್ಕೆ ವಾತ್ಸಲ್ಯವೇ ಮದ್ದು.
೧೫೦. ಸಂತೋಷವೇ ಯೌವನ, ಚಿಂತೆಯೇ ಮುಪ್ಪು.
೧೫೧. ಹಸಿದವರ ಮುಂದೆ ಭಾಷಣ ಮಾಡಿದ ಹಾಗೆ.
೧೫೨. ಹಳೆಯ ಕೋಟು ಧರಿಸಿ, ಹೊಸ ಪುಸ್ತಕ ಕೊಳ್ಳಿ.
೧೫೩. ಊಟಕ್ಕೆ ಮೊದಲು ಉಪ್ಪಿನ ಕಾಯಿ, ಮಾತಿಗೆ ಮೊದಲು ಗಾದೆ.
೧೫೪. ಆರಿದ್ರೆ ಮಳೆಯಲ್ಲಿ ಆದವನೇ ಒಡೆಯ.
೧೫೫. ಸ್ವಾತಿ ಮಳೆ ಬಿದ್ರೆ ಮುತ್ತಿನಂಥ ಜೋಳ.
೧೫೬. ಕುಲ ಬಿಟ್ಟರೂ ಛಲ ಬಿಡಬೇಡ.
೧೫೭. ಹೊಸ ಮಂಜು ಹಳೆಯದನ್ನು ಕೊಚ್ಚದಿದ್ದೀತೆ.
೧೫೮. ಕೆಟ್ಟದಲ್ಲದ ಮೇಲೆ ಪಿಸುಗುಟ್ಟೋದು ಯಾಕೆ?
೧೫೯. ಇಬ್ಬರು ಒಪ್ತಾರೆ ಮೂವರು ವಿರೋಧಿಸುತ್ತಾರೆ ಎಂದಂತೆ!
೧೬೦. ಮನೇಲಿ ಕತ್ತಲೆ, ಪರರಿಗೆ ದೀಪ ದಾನ ಮಾಡಿದ.
೧೬೧. ಇರೋದು ಕಲಿಸುತ್ತೆ, ಇಲ್ಲದ್ದು ನಾಚಿಸುತ್ತೆ.
೧೬೨. ಒಬ್ಬನ ಗಡ್ಡಕ್ಕೆ ಬೆಂಕಿ ಹತ್ತಿದಾಗ, ಮತ್ತೊಬ್ಬ ಕೈ ಕಾಯಿಸಿದ.
೧೬೩. ಮನೆಯೊಡತಿ ಮುಖದ ಮೇಲೆ ಉಗುಳಿದರೂ ಹೊರಗೆ ಬಂದು ನಾನು ಬೆವತಿದ್ದೇನೆ ಅಂದಂತೆ!
೧೬೪. ಹುಲಿ ಹಸಿದಾಗ ಹುಲ್ಲು ತಿಂದೀತೆ?
೧೬೫. ಕುದುರೆ ಕುರುಡಾದರೂ ಕಡಿಮೆಯೇನೂ ತಿನ್ನುವುದಿಲ್ಲ!
೧೬೬. ದುರುಳನಿಂದಲೇ ದುರುಳುತನ.
೧೬೭. ಅಕಾಲದಲ್ಲಿ ಬೆಳೆಯಿದ್ದಂತೆ ವೃದ್ಧಾಪ್ಯದಲ್ಲಿ ಮಕ್ಕಳು.
೧೬೮. ನೆಂಟರನ್ನು ಲಕ್ಷಿಸದಿರಲು, ಸ್ನೇಹಿತರನ್ನು ಅಲಕ್ಷಿಸದಿರು.
೧೬೯. ಕಸದಲ್ಲಿ ಮಲಗಿ ಅರಮನೆ ಕನಸು ಕಂಡಂತೆ.
೧೭೦. ಮಧ್ಯಾಹ್ನದ ಊಟವಾದಮೇಲೆ ಮುಳ್ಳಿನ ಮೇಲಾದರೂ ಮಲಗು, ರಾತ್ರಿ ಊಟವಾದ ಮೇಲೆ ಅರ್ಧ ಮೈಲಿ ನಡೆ.
೧೭೧. ಹುಟ್ಟಿನಿಂದಲೇ ವಕ್ರವಾದದ್ದು, ಪೋಷಣೆಯ ಮೂಲಕ ಸರಿಯಾದಂತೆ.
೧೭೨. ಬಾವಿಯ ಬಾಯನ್ನು ಮುಚ್ಚಬಹುದು, ಜನಗಳ ಬಾಯನ್ನಲ್ಲ.
೧೭೩. ಆಳವಿಲ್ಲದ ನೀರು ಭಾರಿ ಶಬ್ದ ಮಾಡೀತು.
೧೭೪. ತನ್ನ ಯಂತ್ರಕ್ಕೆ ಎಣ್ಣೆ ಹಾಕಲೂ ಆಗದವ ಇನ್ನೊಬ್ಬರಿಗೆ ಉಪದೇಶ ನೀಡಿದಂತೆ.
೧೭೫. ಪಾದಕ್ಕೆ ತಕ್ಕಂತೆ ಚಪ್ಪಲಿ ತಗೊ, ಬಾಗಿಲಿನೆತ್ತರಕ್ಕೆ ತಕ್ಕಂತೆ ಬಗ್ಗಿ ನಡಿ.
೧೭೬. ಮನೆಯ ಕಷ್ಟಕ್ಕೆ ನೆರೆಮನೆಯವರು ಹೊಣೆ ಏನು?
೧೭೭. ಮನೆಯ ಬಾಗಿಲಿಗೆ ಬೀಗ ಹಾಕಿಕೋ, ಮನದ ಬಾಗಿಲನ್ನು ತೆರೆದಿಡು.
೧೭೮. ನಗುವೇ ಆರೋಗ್ಯದ ಗುಟ್ಟು.
೧೭೯. ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನು, ರೋಗವನ್ನು ದೂರವಿಡು.
೧೮೦. ಬೆಕ್ಕು ನಮ್ಮನೇದು, ಹಾಲು ಪಕ್ಕದ ಮನೇದು.
೧೮೧. ಕಹಿ ಪದಾರ್ಥ ತಿಂದು ಸಿಹಿ ಮಾತನಾಡು.
೧೮೨. ಮುಖ ನೋಡಿ ಮನ ತಿಳಿ.
೧೮೩. ಮಾತು ಚಿಕ್ಕದಾಗಿರಲಿ, ಕೆಲಸ ಚೊಕ್ಕವಾಗಿರಲಿ.
೧೮೪. ಮಾತು ಮೊಳದುದ್ದ, ಕೆಲಸ ಕಿರುಬೆರಳುದ್ದ.
೧೮೫. ಮನೆ, ಮನ ಓಡೆದರೆ ಅಂಟಿಸಲಾಗದ ಕನ್ನಡಿಯಂತೆ.
೧೮೬. ಕೋಪ ಕೆಲಸ ಕೆಡಿಸುತ್ತೆ, ಶಾಂತಿ ಮುಂದೆ ನಡೆಸುತ್ತೆ.
೧೮೭. ಮನುಜನಾಗಿ ಹುಟ್ಟಿ ಪಶುವಿನಂತೆ ಬದುಕಿದಂತೆ!
೧೮೮. ಕಳೆದ ದಿನಗಳು ಬರೆದ ಪುಟಗಳಂತೆ.
೧೮೯. ಪರಿಚಿತರ ಮರೆಯಬೇಡ, ಅಪರಿಚಿತರ ನಂಬಬೇಡ.
೧೯೦. ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ.
೧೯೧. ಒಗ್ಗಿದರೆ ಮನೆಯಾದರೇನು, ಸ್ಮಶಾನವಾದರೇನು?
೧೯೨. ಕೆಡುವವರು ಮನೇಲಿದ್ರು ಕೆಡುತ್ತಾರೆ.
೧೯೩. ನಮ್ಮಬುದ್ಧಿ ಪರರ ಕೈಯಲ್ಲಿದ್ದಂತೆ.
೧೯೪. ಮೆತ್ತಗಿದ್ರೆ ತುಳೀತಾರೆ, ಜೋರಾಗಿದ್ರೆ ಹೆದ್ರತಾರೆ.
೧೯೫. ನೋಡಿ ನಡೆದಾಗ ಎಡವೋದು ತಪ್ಪುತ್ತೆ.
೧೯೬. ತೀರ್ಥ ಎಂದು ಎಲ್ಲೆಲ್ಲೋ ನೀರು ಕುಡಿದಂತೆ!
೧೯೭. ಹಳೇ ಚಪ್ಪಲಿ ಆದ್ರೂ ಪರವಾಗಿಲ್ಲ, ಬರಿಗಾಲಲ್ಲಿ ನಡೀಬೇಡ.
೧೯೮. ರೈತನ ಮುಗ್ಗು ನಾಡಿನ ಕುಗ್ಗು.
೧೯೯. ದರಿದ್ರ ಏಳಗೊಡುವುದಿಲ್ಲ, ಆಲಸ್ಯ ಉಣಗೊಡುವುದಿಲ್ಲ.
೨೦೦. ನಾಚಿಕೆ ಬಿಟ್ಟವ ಊರಿಗೇ ದೊಡ್ಡವ.
೨೦೧. ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!
೨೦೨. ಹತ್ತೋಕ್ ಮೊದ್ಲು ಕುದರೆ ನೋಡು, ಬಿತ್ತೊಕ್ ಮೊದ್ಲು ಹೊಲ ನೋಡು.
೨೦೩. ಅಶ್ವಿನೀ ಸಸ್ಯನಾಶಿನೀ.
೨೦೪. ಭರಣಿ ಮಳೆ ಧರಣಿ ಬೆಳೆ.
೨೦೫. ರೋಹಿಣಿ ಮಳೆ ಓಣಿಯೆಲ್ಲಾ ಕೆಸರು.
೨೦೬. ಉತ್ತರಿ ಮಳೆ ಹುಯ್ದರೆ ಹೆತ್ತಮ್ಮನೂ ಆಗೋಲ್ಲ.
೨೦೭. ಆದರೆ ಆರಿದ್ರಾ ಇಲ್ವಾದ್ರೆ ದರಿದ್ರ!
೨೦೮. ಹಸ್ತ ಇಲ್ದಿದ್ರೆ ಒಕ್ಕಲಿಗ ಹಲ್ಲು ಕಿಸ್ದ.
೨೦೯. ಸ್ವಾತಿ ಮಳೆ ಮುತ್ತಿನ ಬೆಳೆ.
೨೧೦. ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
೨೧೧. ಅನುರಾಧ ಬಂದರೆ ನಮ್ಮ ರಾಗಿ ನಮ್ಮದು.
೨೧೨. ಚಿತ್ತಾ ಮಳೆ ವಿಚಿತ್ರ ಬೆಳೆ!
೨೧೩. ಪೂರ್ವಾಷಾಢ-ಉತ್ತರಾಷಾಢ ಬೇಡವೇ ಬೇಡ.
೨೧೪. ಬಾಡಿಗೆ ಎತ್ತು ಅಂತ ಹೊಡಿದು ಬಡಿಬಾರದು.
೨೧೫. ಆಕಳಿಲ್ಲದವ ಬೆಳೆಸು ಮಾಡ್ಯಾನ, ಆಕಳಿದ್ದವ ಮಕ್ಕಳ ಸಾಕ್ಯಾನ.
೨೧೬. ಉಣಬೇಕು- ಉಡಬೇಕು ಎಂಬೋದಾದ್ರೆ ಎಮ್ಮೆ ಕಟ್ಟಬೇಕು.
೨೧೭. ಬಾಳೆ ಬೆಳೆದವ ಬಾಳಿಯಾನು.
೨೧೮. ತೆಂಗು ಬೆಳೆದವನಿಗೂ ಗಂಡು ಹೆಡೆದವಳಿಗೂ ಚಿಂತೆಯಿಲ್ಲ.
೨೧೯. ತೋಟ ಮಾಡಿದವನಿಗೆ ಕೋಟಲೆಯಿಲ್ಲ.
೨೨೦. ಬಲ್ಲಿದವನಿಗೆ ಕಬ್ಬು.
೨೨೧. ಆದರೆ ಒಂದಡಿಕೆ ಮರ, ಹೋದರೆ ಒಂದು ಗೋಟು.
೨೨೨. ತಂದೆ, ತಾಯಿ ಸತ್ತರೂ ಸೋದರ ಮಾವ ಇರಬೇಕು.
೨೨೩. ವಿದ್ಯಾವಂತನಾದರೆ ಜಗತ್ತಿನ ಆಡಳಿತವನ್ನೇ ನಡೆಸಬಹುದು.
೨೨೪. ಪರಿಸರ ಮಾಲಿನ್ಯ ವಿನಾಶಕ್ಕೆ ಕಾರಣ.
೨೨೫. ದೇಹಕ್ಕೆ ಮುಪ್ಪಾದರೇನಾಯ್ತು, ಅಧ್ಯಯನಕ್ಕೆ ಮುಪ್ಪಿದೆಯೇ?
೨೨೬. ಶರಣು ಆದವನಿಗೆ ಮರಣವಿಲ್ಲ.
೨೨೭. ಜಾಣನಿಗೆ ಮೂರು ದಾರಿ, ಕೋಣನಿಗೆ ಒಂದೇ ದಾರಿ.
೨೨೮. ಗುರುವಿಲ್ಲದೇ ಮಠವಿಲ್ಲ, ಹಿರಿಯರಿಲ್ಲದೆ ಮನೆಯಿಲ್ಲ.
೨೨೯. ಮನೆ ಗೆದ್ದು ಮಾರು ಗೆಲ್ಲು.
೨೩೦. ಮಾತು ಅಂಗಾರ ಮೌನ ಬಂಗಾರ
೨೩೧. ಗುರಿಯಿಟ್ಟು ಗುಂಡು ಹಾಕು, ಸಮಯ ಸಾಧಿಸಿ ಬೇಟೆಯಾಡು.
೨೩೨. ಮನೆಯಲ್ಲಿ ರಾಮಣ್ಣನಂತೆ, ಬೀದಿಯಲ್ಲಿ ಕಾಮಣ್ಣನಂತೆ.
೨೩೩. ಕೆಟ್ಟದ್ದನ್ನು ಬಯಸಬೇಡ, ಒಳ್ಳೆಯದನ್ನು ಬಿಡಬೇಡ.
೨೩೪. ಮಾನವನಾದ ಮೇಲೆ ಮೂರು ಆಕ್ಷರ ಮೊದಲು ಕಲಿ.
೨೩೫. ಒಲೆಯಮೇಲೆ ಇಟ್ಟಾಗ ಉಕ್ಕಿದಂತೆ ಹಾಲು, ಒಗ್ಗಟ್ಟಿಲ್ಲದ ಮನೆ ಬೀದಿಪಾಲು.
೨೩೬. ಬಾಲ್ಯವಿಲ್ಲದೆ ಯೌವ್ವನವಿಲ್ಲ, ಯೌವ್ವನವಿಲ್ಲದೆ ಮುಪ್ಪಿಲ್ಲ.
೨೩೭. ದಯವಿಲ್ಲದ ಧರ್ಮವಿಲ್ಲ.
೨೩೮. ಮಾತಿಗೆ ನೆಲೆಯಿಲ್ಲ, ಪ್ರೇಮಕ್ಕೆ ಬೆಲೆಯಿಲ್ಲ.
೨೩೯. ಕೋಣನಿಗೆ ಏನು ಗೊತ್ತು ಲತ್ತೆ ಪೆಟ್ಟು.
೨೪೦. ಆಸೆಯಿಲ್ಲದವನು ದೇಶಕ್ಕೆ ಶ್ರೀಮಂತ.
೨೪೧. ಇನ್ನೊಬ್ಬರ ಮಾತಿಗೆ ಕಿವಿಗೊಡಬೇಡ, ಚಾಡಿಹೇಳಿ ಜಗಳ ಹಚ್ಚಬೇಡ.
೨೪೨. ಕೋಣನಾಗಿರುವುದಕ್ಕಿಂತ ಜಾಣನಾಗಿರುವುದು ಲೇಸು.
೨೪೩. ಗೆಳೆತನದಲ್ಲಿ ಮೋಸಮಾಡಬೇಡ.
೨೪೪. ಬಾಯಿಯಲ್ಲಿ ಬೆಲ್ಲ ಎದೆಯಲ್ಲಿ ನೀಚತನ.
೨೪೫. ಹಿಮಾಲಯದಲ್ಲಿ ಹಿಮ ಹೆಚ್ಚಂತೆ, ವೀರಭದ್ರನಲ್ಲಿ ಅವತಾರ ಹೆಚ್ಚಂತೆ.
೨೪೬. ಕಾಯಕವನ್ನು ಸದಾ ಮಾಡು, ಸೋಮಾರಿತನವನ್ನು ಬಿಡು.
೨೪೭. ಮೈತುಂಬ ಕಣ್ಣಿರಲಿ, ಕೈಯಲ್ಲಿ ಪೆನ್ನಿರಲಿ.
೨೪೮. ಹಿರಿಯರ ಮಾತಿಗೆ ಕಿವಿಗೊಡು, ಚುಚ್ಚುಮಾತಿಗೆ ಬೆನ್ನು ಕೊಡು.
೨೪೯. ವಿನಯದಿಂದ ವಿಶ್ವವನ್ನು ಗೆಲ್ಲು, ಪರನಿಂದೆ ಮಹಾಪಾಪ.
೨೫೦. ಮೊದಲು ಕಣ್ಣು ಬಿಡು, ನಂತರ ಕೈ ಮಾಡು.
೨೫೧. ನಿನ್ನಿಂದ ಆದ ಪಾಪ, ಅದೇ ನಿನಗೆ ಶಾಪ.
೨೫೨. ನಿಂತ ನೀರಿನಲ್ಲಿ ಕ್ರಿಮಿ ಹುಟ್ಟುತ್ತವೆ, ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.
೨೫೩. ಖೀರು ಕುಡಿದವ ಓಡಿಹೋದ, ನೀರು ಕುಡಿದವ ಸಿಕ್ಕಿಬಿದ್ದ.
೨೫೪. ಯಾದವೇಂದ್ರ ದನ ಕಾದ, ರಾಘವೇಂದ್ರ ರಾಜ್ಯವಾಳಿದ.
೨೫೫. ಹಟ್ಟಿ ತುಂಬಾ ಹಸು, ಹಾಲು ಮಾತ್ರ ತುಸು.
೨೫೬. ಹಾಲು ಕುಡಿದು ಹಾಗಲಕಾಯಿ ತಿಂದಂತೆ.
೨೫೭. ಹುಲಿಗಲ್ಲ, ಸಿಂಹಕ್ಕಲ್ಲ, ಮನೆಯ ಹೆಂಡತಿಯ ನೆರಳಿಗಂಜಿದ.
೨೫೮. ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರುವುದನ್ನು ಬಿಟ್ಟೀತೆ?
೨೫೯. ಏನು ಬೇಡಿದರೊಬ್ಬ ದಾನಿಯನ್ನು ಬೇಡು, ದೀನನಾ ಬೇಡಿದರೆ ಆ ದೀನ ಏನು ಕೊಟ್ಟಾನು?
೨೬೦. ಇತ್ತಿತ್ತ ಬಾ ಎಂದರೆ ಹೆಗಲೇರಿ ಕುಳಿತ.
೨೬೧. ಹಣದಲ್ಲಿ ಬಡವನಾದರೂ ಬುದ್ಧಿಯಲ್ಲಿ ಬಡವನಾಗಬಾರದು.
೨೬೨. ಹಣವಿಲ್ಲದ ಮನುಷ್ಯ, ರೆಕ್ಕೆ ಇಲ್ಲದ ಪಕ್ಷಿಯಂತೆ.
೨೬೩. ಹಡಗಿನ ವ್ಯಾಪರ, ಉಪ್ಪಿಗೆ ಬಡತನ.
೨೬೪. ಬುದ್ಧಿಗಳ್ಳನಿಗೆಲ್ಲಿ ಸತ್ಯ, ಸದಾಚಾರ!
೨೬೫. ಚಾತುರ್ಯ ಬಲ್ಲವನಿಗೆ ಚಾಚೂ ಚಿಂತಿಲ್ಲ.
೨೬೬. ಸತ್ತವರಿಗೆ ಸಂಗವಿಲ್ಲ, ಕೆಟ್ಟವರಿಗೆ ನೆಂಟರಿಲ್ಲ.
೨೬೭. ನಿದ್ದೆಗೆ ಮದ್ದಿಲ್ಲ, ವಜ್ರಕ್ಕೆ ಬೆಲೆಯಿಲ್ಲ.
೨೬೮. ಮನೆ ಮಕ್ಕಳು ಮಾಣಿಕ್ಯ, ನೆರೆಮನೆ ಮಕ್ಕಳು ಕಸಿವಿಸಿ.
೨೬೯. ಹೆಣ್ಮಕ್ಕಳಿಗೆ ತಾಯಿ ಶಿಕ್ಷೆ,, ಗಂಡ್ಮಕ್ಕಳ್ಳಿಗೆ ತಂದೆ ಶಿಕ್ಷೆ.
೨೭೦. ಮುಖಕ್ಕೆ ಮೂಗು ಚೆಂದ, ಮೂಗಿಗೆ ಮೇಲೆರಡು ಕಣ್ಣು ಚೆಂದ.
೨೭೧. ವಯಸ್ಸಿಗೆ ತಕ್ಕ ಬುದ್ಧಿ ಕಲಿ.
೨೭೨. ಕಾಲಿದ್ದವನಿಗೆ ಆಟ, ಕಣ್ಣಿದ್ದವನಿಗೆ ನೋಟ.
೨೭೩. ಉಗುಳಿ ಉಗುಳಿ ರೋಗ, ಬೊಗಳಿ ಬೊಗಳಿ ರಾಗ.
೨೭೪. ಆಸೆ ಆಸ್ತಿ ಮಾಡ್ತು, ದುರಾಸೆ ನಾಶ ಮಾಡ್ತು.
೨೭೫. ಅಪಕೀರ್ತಿ ತರುವ ಮಗನಿಗಿಂತ, ಸತ್ಕೀರ್ತಿ ತರುವ ಆಳೇ ಮೇಲು.
೨೭೬. ಕೊಟ್ಟು ಕೆಟ್ಟವರಿಲ್ಲ, ತಿಂದು ಬದುಕಿದವರಿಲ್ಲ.
೨೭೭. ಸಮಯಕ್ಕೆ ಬಾರದ ಬುದ್ಧಿ, ಸಾವಿರ ಇದ್ದರು ಲದ್ದಿ,
೨೭೮. ಹೊರಗೆ ಝಗ ಝಗ, ಒಳಗೆ ಭಗ ಭಗ.
೨೭೯. ಕಲ್ಲಾದರು ಕರಗಬಹುದು, ಕಪಟಿಯ ಮನಸ್ಸು ಕರಗದು.
೨೮೦. ಮೂಕವೇದನೆಯು ಸತ್ಯಕ್ಕಿಂತ ಮೇಲು.
೨೮೧. ಕೃತಿಯಿಲ್ಲದ ಮಾತು, ಕಸ ಬೆಳೆದ ತೋಟವಿದ್ದಂತೆ.
೨೮೨. ಒಳ್ಳೆಯ ಕೆಲಸಕ್ಕೆ ವಿಘ್ನ ಹೆಚ್ಚು.
೨೮೩. ಲೆಕ್ಕಕ್ಕಿಂತ ಹೆಚ್ಚು ಹೊರಬಾರದು, ಲೆಕ್ಕಕ್ಕಿಂತ ಹೆಚ್ಚು ದೂರೆಬಾರದು.
೨೮೪. ಅರ್ಧ ಕಲಿತವನ ಆಬ್ಬರ ಹೆಚ್ಚು.
೨೮೫. ದೇಶ ತಿರುಗಬೇಕು, ಭಾಷೆ ಕಲಿಯಬೇಕು.
೨೮೬. ಆಸೆಗೆ ಮಿತಿಯಿಲ್ಲ, ಆಕಾಶಕ್ಕೆ ಅಳತೆಯಿಲ್ಲ.
೨೮೭. ಅಲ್ಪರ ಸಂಗ ಅಭಿಮಾನ ಭಂಗ.
೨೮೮. ಸಂಕೋಚ ಮಾಡಿದರೆ ಸಂಕಪಾಷಾಣವೂ ಸಿಗದು.
೨೮೯. ಬಾವಿ ತೋಡದೆ ನೀರು ಸಿಗದು, ಪ್ರಯತ್ನ ಮಾಡದೆ ಫಲ ಸಿಗದು.
೨೯೦. ಪಡಿತಿಂದು ಗುಡಿಯಲ್ಲಿ ಉರುಳಾಡಿದ.
೨೯೧. ನೋಡಿ ನಡೆದವನಿಗೆ ಕೇಡಿಲ್ಲ.
೨೯೨. ಪದವೂ ಮುಗಿಯಿತು, ತಂತಿಯೂ ಹರಿಯಿತು.
೨೯೩. ಪದವಿ ಬಂದ ಬಳಿಕ ಮದವೂ ಬರತಕ್ಕದ್ದೆ.
೨೯೪. ಪಾಪಕ್ಕೆ ಹೆದರು, ತಾಪಕ್ಕೆ ಹೆದರದಿರು.
೨೯೫. ಪುಷ್ಪವಿಲ್ಲದ ಪೂಜೆ, ಅಶ್ವವಿಲ್ಲದ ಅರಸನಿಗೆ ಸಮ.
೨೯೬. ಮಗ ಸಣ್ಣವನಾದರೂ, ಮಾತು ಸಣ್ಣದಲ್ಲ.
೨೯೭. ಮಂತ್ರ ಸ್ವಲ್ಪ, ಉಗುಳೇ ಬಹಳ.
೨೯೮. ಮಾನ ಹೋದ ಮೇಲೆ ಮರಣ ಬಂದ ಹಾಗೆ.
೨೯೯. ಬೆಲ್ಲವಿದ್ದಲ್ಲಿ ನೊಣ, ಕೆಂಡವಿದ್ದಲ್ಲಿ ಕಾವು.
೩೦೦. ಬೇಕಾದ ಮಾತು, ಬೆಲ್ಲಕ್ಕಿಂತ ಸವಿ.
೩೦೧. ಬಾಯಿ ಬಂಗಾರ, ಮನ ಅಂಗಾರ.
೩೦೨. ಬಾಯಿಯಿದ್ದ ಮಗ ಬದುಕುವನು.
೩೦೩. ಭಾರವಾದ ಪಾಪಕ್ಕೆ ಘೋರವಾದ ನರಕ.
೩೦೪. ಬೀಜದಂತೆ ವೃಕ್ಷ, ವೃಕ್ಷದಂತೆ ಬೀಜ.
೩೦೫. ಬಿಸಿಯಾದರೆ ಮಾತ್ರ ಬೆಣ್ಣೆ ಕರಗುವುದು.
೩೦೬. ಕಲಿತವನಿಗಿಂತ ನುರಿತವನೇ ಮೇಲು.
೩೦೭. ಕಷ್ಟದಂತೆ ಫಲ, ಮನದಂತೆ ಮಹಾದೇವ.
೩೦೮. ಕೀಟ ಸಣ್ಣದಾದರೂ ಕಾಟ ಬಹಳ.
೩೦೯. ಕುರಿ ಹಿಂಡಲ್ಲಿ ತೋಳ ಹೊಕ್ಕಂತೆ.
೩೧೦. ಕೂಳಿಗೆ ಮೂಲ ಭೂಮಿಗೆ ಭಾರ.
೩೧೧. ಕೇಳುವವರ ಮುಂದೆ ಹೇಳುವವರು ದಡ್ಡರು.
೩೧೨. ಹಿರಿಯರಿಗೆ ಶಿರಬಾಗು, ಗುರುವಿಗೆ ತಲೆಬಾಗು.
೩೧೩. ಹಿಡಿ ತುಂಬ ಹಣವಿದ್ದರು ಗುಡಿ ಚೆನ್ನಾಗಿರಬೇಕು.
೩೧೪. ಹಸಿದವನಿಗೆ ಹಳಸಿದ್ದೇ ಪಾವನ.
೩೧೫. ಹರಿದಿದ್ದೇ ಹಳ್ಳ, ನಿಂತಿದ್ದೇ ತೀರ್ಥ.
೩೧೬. ಸುಳ್ಳು ಹೇಳುವುದಕ್ಕಿಂತ ಸುಮ್ಮನಿರುವುದು ಲೇಸು.
೩೧೭. ಸುಣ್ಣ ತಿಂದ ಮಂಗ ಹಲ್ಲು ಕಿಸಿದಂತೆ.
೩೧೮. ಸುಡುಗಾಡಿನಲ್ಲಿ ಕುಳಿತು ಸುಖ ಬಯಸಿದಂತೆ.
೩೧೯. ಎಣ್ಣೆ ತಣ್ಣಗಾದರೆ ಬೆಣ್ಣೆಯ ಹಾಗೆ ಇದ್ದೀತೆ?
೩೨೦. ಅಹಂಕಾರ ಇದ್ದ ಮನುಷ್ಯ ಏನನ್ನೂ ಸಾಧಿಸಲಾರ.
೩೨೧. ಕಡಲೆಗೆ ಮುಂದು ಕಡಿವಾಣಕ್ಕೆ ಹಿಂದು.
೩೨೨. ಆಸೆಯೇ ಜೀವನ, ಜೀವನವೇ ಆಸೆ.
೩೨೩. ಎಡವಿದ ಕಾಲೇ ಎಡವುದು ಹೆಚ್ಚು.
೩೨೪. ಸಾವಿಲ್ಲದ ಮನೆಯಿಲ್ಲ, ಸೋಲಿಲ್ಲದ ಮನುಷ್ಯನಿಲ್ಲ.
೩೨೫. ಎಣ್ಣೆ ಬರುವಾಗ ಗಾಣ ಮುರೀತು.
೩೨೬. ಆದರೆ ಹಬ್ಬ, ಇಲ್ಲದಿದ್ದರೆ ಬರಗಾಲ.
೩೨೭. ಗಿಡ ಮೂರು ಮೊಳ, ಕಾಯಿ ಆರು ಮೊಳ.
೩೨೮. ಕಂಚು ಕಡೆಯಲ್ಲ, ಹಂಚು ದ್ರವ್ಯವಲ್ಲ.
೩೨೯. ಭೂಮಿಯಿಂದ ಆಕಾಶಕ್ಕೆ ಏಣಿಯನ್ನು ಇಟ್ಟ.
೩೩೦. ಕಳ್ಳ ಹೊಕ್ಕ ಮನೆಗೆ ಎಣ್ಣೆ ದಂಡ.
೩೩೧. ಅಕ್ಷರ ಕಲಿಯುವುದಕ್ಕೆ ಬೇಧಭಾವ ಬೇಡ.
೩೩೨. ಉರುಳುವ ಕಲ್ಲಿಗೆ ಏನೂ ಅಂಟುವುದಿಲ್ಲ.
೩೩೩. ಪಂಜರದಲ್ಲಿ ಕಾಗೆ ಇಟ್ಟರೆ ಪಂಚಮ ಸ್ವರ ಕೊಟ್ಟೀತೆ?
೩೩೪. ಅಪಾಯ ತೀರಿತು, ದೇವರನ್ನು ಮರೆತಾಯಿತು.
೩೩೫. ಪ್ರೀತಿಗೊಂದು ಮುತ್ತು, ಹಸಿವಿಗೊಂದು ತುತ್ತು.
೩೩೬. ಕತ್ತಿ ಬಂಗಾರದ್ದಾಗಿದೆಯೆಂದು ಕತ್ತು ಕೊಯ್ದುಕೊಳ್ಳಲು ಸಾಧ್ಯವೇ?
೩೩೭. ಎಣ್ಣೆ ಚೆಲ್ಲಿದವನೂ ಅತ್ತ, ಕಾಯಿ ಚೆಲ್ಲಿದವನೂ ಅತ್ತ.
೩೩೮. ಹೊಳೆಗೆ ಸುರಿದರೂ ಅಳೆದು ಸುರಿ ಎಂದಂತೆ.
೩೩೯. ಬಾಳೆಗೊಂದು ಗೊನೆ, ಬಾಳಿಗೊಂದು ಮಾತು.
೩೪೦. ಮಾತು ಆಡಿದರೆ ಮುತ್ತಿನ ಹಾರದಂತಿರಬೇಕು.
೩೪೧. ಮರ ನೆಟ್ಟು ಪಾಪವನ್ನು ಕಳೆದುಕೋ.
೩೪೨. ಅಪ್ಪನ ಮಾತು ಕೇಳದವನು ಅಮ್ಮನ ಮಾತು ಕೇಳಿಯಾನೆ?
೩೪೩. ಮೂರು ವರ್ಷದ ಬುದ್ಧಿ ನೂರು ವರುಷದ ತನಕ.
೩೪೪. ನೀರುಗಣ್ಣಿನ ಹೆಂಗಸು ಊರು ಹಾಳು ಮಾಡಿದಳಂತೆ.
೩೪೫. ಸೆಗಣಿ ಮೇಲೆ ಕಲ್ಲು ಹಾಕಿ, ಮುಖಕ್ಕೆ ಸಿಡಿಸಿಕೊಂಡಂತೆ.
೩೪೬. ಆಸೆ ಆಕಾಶದಷ್ಟು, ಸಾಧನೆ ಸಾಸಿವೆಯಷ್ಟೇ.
೩೪೭. ಇಲಿ ಬೇಟೆಗೆ ತಮಟೆ ಬಡಿದಂಗೆ.
೩೪೮. ಉಳಿ ಸಣ್ಣದಾದರು ಕುಳಿ ತೋಡದೆ ಬಿಡಲಾರದು.
೩೪೯. ಕಡಲೆ ತಿಂದು ಕೈತೊಳೆದ ಹಾಗೆ.
೩೫೦. ಮದುವೆ ಸಂಭ್ರಮದಲ್ಲಿ ತಾಳಿ ಕಟ್ಟುವುದನ್ನೇ ಮರೆತಂತೆ.
೩೫೧. ತುಂಟ ಮಂಟಪಕ್ಕೋದರೂ ತುಂಟತನ ಬಿಡಲಿಲ್ಲ.
೩೫೨. ಹೆಂಡತಿ ಮುಂದಿರಬೇಕು, ಮಗ ಹಿಂದಿರಬೇಕು.
೩೫೩. ಕಜ್ಜಿ ಕೆರೆದಷ್ಟು ಹಿತ, ಚಾಕೂ ಮಸೆದಷ್ಟೂ ಹರಿತ.
೩೫೪. ಕೋಟಿಗೆ ಒಬ್ಬ ಕುಬೇರ, ನೋಟಕ್ಕೆ ಒಬ್ಬ ಸುಂದರ.
೩೫೫. ಜಾತಿ ಜಾತಿಗೆ ವೈರಿ, ನಾಯಿ ನಾಯಿಗೆ ವೈರಿ.
೩೫೬. ಮದುವೆ ಸಾಲ ಮಸಣಾದವರೆಗೂ.
೩೫೭. ನೂಲಿನಂತೆ ಸೀರೆ, ಬೀಜದಂತೆ ವೃಕ್ಷ.
೩೫೮. ಶ್ರೀಮಂತನ ಮನೆ ಸೀಮಂತಕ್ಕೆ ಬಡವ ಬಡಬಡಿಸಿದ ಹಾಗೆ.
೩೫೯. ಮೊಸರು ಇಟ್ಟುಕೊಂಡು ಮಜ್ಜಿಗೆಗೆ ಅತ್ತಹಾಗೆ.
೩೬೦. ಕುಡಿಗೆ ಕುಂಬಳಕಾಯಿ ಭಾರವೇ?
೩೬೧. ಮಾವನು ಇಲ್ಲದ ಮನೆಯೇಕೆ, ಹೆಂಡತಿಯಿಲ್ಲದ ಒಡವೆಯೇಕೆ?
೩೬೨. ಊಟವಿಲ್ಲದ ಉಪದೇಶಿ ಊರಿಗೆಲ್ಲಾ ನಿವಾಸಿ.
೩೬೩. ಸೋಲಿಲ್ಲದ ಸರದಾರನಿಲ್ಲ, ಸಂಗಮವಿಲ್ಲದ ಸಾವಿಲ್ಲ.
೩೬೪. ಪ್ರೇಮಿಗಳಿಲ್ಲದ ನಾಡು ಬರೀ ಶೂನ್ಯದ ಬೀಡು.
೩೬೫. ಆತ್ಮೀಯವಾದ ಪ್ರೇಮ ಅಮರವಾದದ್ದು.
೩೬೬. ಸ್ನೇಹ ಎಂಬ ಸಂಪಿಗೆ ಸುಮಧುರವಾದದ್ದು.
೩೬೭. ತಾಯಿಯ ಪ್ರೀತಿ ಸುಖವಾದದ್ದು, ತಂದೆಯ ಪ್ರೀತಿ ಮಧುರವಾದದ್ದು.
೩೬೮. ಮಮತೆಯ ಮಡಿಲಲ್ಲಿ ತೂಗಬೇಕು, ಮನಸ್ಸೆಂಬ ಬಂಧನದಲ್ಲಿ ಬೀಳಬೇಕು.
೩೬೯. ಸಂಸಾರದಲ್ಲಿ ಸುಖವಿದೆ, ಬಾಳೆಂಬ ಬಂಧನದಲ್ಲಿ ಕಷ್ಟವಿದೆ.
೩೭೦. ತಾಯಿಯನ್ನು ನಿಂದಿಸಬೇಡ, ಒಳ್ಳೆಯವರನ್ನು ಬಂಧಿಸಬೇಡ.
೩೭೧. ಮನಸ್ಸನ್ನು ನಿಯಂತ್ರಿಸಿ ಜೀವನ ಸಾಗಿಸಿ.
೩೭೨. ಮನೆ ಬೆಳಗಲಿ ದೀಪ ಬೇಕು, ಮಾನವ ಬೆಳಗಲು ಅಕ್ಷರ ಬೇಕು.
೩೭೩. ಕತ್ತೆಗೆ ತಿಪ್ಪೆಯೇ ತವರುಮನೆ.
೩೭೪. ಕತ್ತೆಗೆ ಯಾಕೆ ಹತ್ತಿಕಾಳು?
೩೭೫. ಸಣ್ಣದಿರುವಾಗ ಕತ್ತೆಯೂ ಬಹಳ ಸುಂದರ.
೩೭೬. ಕತ್ತೆಯಾಗಬೇಡ ಕಾಗೆಯಾಗು.
೩೭೭. ಕತ್ತೆಯ ಹಿಂದೆ ಹೋಳಿಹುಣ್ಣಿಮೆಯಲ್ಲಿ ಮಾತ್ರ ಹೋಗು.
೩೭೮. ಅಪದ್ದಕ್ಕೆ ಅಪ್ಪಣೆ ಕೊಟ್ರೆ ಬಾಯಿಗೆ ಬಂದದ್ದೇ ಮಾತು.
೩೭೯. ಅಪ್ಪ ಮಾಡಿದ ಪುಣ್ಯ ಮಕ್ಕಳ ಕಾಲಕ್ಕೆ.
೩೮೦. ಅಪ್ಪನ ಸಾಲಕ್ಕೆ ಮಗನನ್ನು ತಿಪ್ಪೆ ಮೇಲೆ ಎಳೆದರು.
೩೮೧. ಅರಿತರೆ ಮಾತನಾಡು, ಮರೆತರೆ ಕೂತು ನೋಡು.
೩೮೨. ಆಕಾಶ ನೋಡೋಕೆ ನೂಕಾಟವೇಕೆ?
೩೮೩. ಗುರುಕೊಟ್ಟ ಜೋಳಿಗೆ ಅಂತ ಗೂಟಕ್ಕೆ ಹಾಕಿದರೆ ಊಟ ಹಾಕೀತೆ?
೩೮೪. ಜಾರುವುದು ತಪ್ಪಿದರೆ ಏರುವುದು ಸಾಧ್ಯ.
೩೮೫. ಧೂಳಿ ಧೂಪವಾದೀತೆ, ಮಾಳಿಗೆ ಸ್ವರ್ಗವಾದೀತೆ?
೩೮೬. ಬಾಳೆಂಬ ಬಂಧನದಲ್ಲಿ ಈಜಬೇಕು, ಸಂಸಾರ ಎಂಬ ಸಾಗರದಲ್ಲಿ ತೇಲಬೇಕು.
೩೮೭. ಹೆಸರು ಸಂಪತ್ತು, ಕೂಳಿಗಿಲ್ಲ ಒಪ್ಪತ್ತು.
೩೮೮. ನೇಯುವ ಕಾಲ ತಪ್ಪಿದರೂ, ಸಾಯುವ ಕಾಲ ತಪ್ಪದು.
೩೮೯. ಕೀಳನ ಕೆಣಕಬೇಡ, ಮೇಗಾಲು ತುರಿಸಬೇಡ.
೩೯೦. ಹೊಟ್ಟೆ ತುಂಬಿದ ಮೇಲೆ ಕಜ್ಜಾಯವೂ ವಿಷ
೩೯೧. ದೇವರನ್ನು ಬಯ್ಯುವವರು ಅರ್ಚಕನನ್ನು ಬಿಟ್ಟಾರೆ?
೩೯೨. ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
೩೯೩. ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
೩೯೪. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
೩೯೫. ಕೈ ಕೆಸರಾದರೆ ಬಾಯಿ ಮೊಸರು.
೩೯೬. ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
೩೯೭. ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
೩೯೮. ಮಾತು ಬೆಳ್ಳಿ, ಮೌನ ಬಂಗಾರ.
೩೯೯. ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
೪೦೦. ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
೪೦೧. ಮನೆಗೆ ಮಾರಿ, ಊರಿಗೆ ಉಪಕಾರಿ.
೪೦೨. ಆಳಾಗಬಲ್ಲವನು ಅರಸನಾಗಬಲ್ಲ.
೪೦೩. ಊರಿಗೆ ದೊರೆ ಆದರೂ ತಾಯಿಗೆ ಮಗನೆ.
೪೦೪. ಹೆತ್ತವರಿಗೆ ಹೆಗ್ಗಣ ಮುದ್ದು.
೪೦೫. ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
೪೦೬. ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
೪೦೭. ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
೪೦೮. ಮನಸಿದ್ದರೆ ಮಾರ್ಗ.
೪೦೯. ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
೪೧೦. ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
೪೧೧. ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
೪೧೨. ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
೪೧೩. ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
೪೧೪. ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ. ೪೧೫.
೪೧೫. ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
೪೧೬. ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
೪೧೭. ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
೪೧೮. ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
೪೧೯. ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
೪೨೦. ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
೪೨೧. ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
೪೨೨. ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
೪೨೩. ತುಂಬಿದ ಕೊಡ ತುಳುಕುವುದಿಲ್ಲ.
೪೨೪. ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
೪೨೫. ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
೪೨೬. ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
೪೨೭. ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
೪೨೮. ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
                                                             ಇತರೆ
ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
ಇತರರ ಕಣ್ಣಿನ ಕಸ ಕಾಣುವುದು, ತನ್ನ ಕಣ್ಣಿನ ಕಸ ಕಾಣುವುದಿಲ್ಲ.
ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
ನಾನು ಅಗೆಯುವಲ್ಲಿ ಕಲ್ಲು, ಅಜ್ಜ ಅಗೆಯುವಲ್ಲಿ ಮಣ್ಣು.
ದಡ್ಡ ಮನುಷ್ಯ ನೆಲಕ್ಕೆ ಭಾರ, ಅನ್ನಕ್ಕೆ ಖಾರ.
ದಡ್ಡನಿಗೆ ಹಗಲು ಕಳೆಯುವುದಿಲ್ಲ, ಒಳ್ಳೆಯವನಿಗೆ ರಾತ್ರಿ ಸಾಲುವುದಿಲ್ಲ.
ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ.
ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
ತಿನ್ನಲು, ಉಣ್ಣಲು ಇದ್ದರೆ ಯಾವತ್ತೂ ನೆಂಟರು.
ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
ನೂರಾರು ರೋಗಿಗಳನ್ನು ಕೊಂದು ಒಬ್ಬ ವೈದ್ಯ ಆದಂತೆ !
ವಿವಿಧ ರೋಗಗಳಿಗೆ ಮದ್ದಿವೆ, ಹೊಟ್ಟೆ ಉರಿಗೆ ಮದ್ದಿಲ್ಲ.
ಅಡಿಕೆಕಾಯಿಯನ್ನು ಚೀಲದೊಳಗೆ ಹಾಕಬಹುದು, ಮರ ಆದ ನಂತರ ಹಾಕಬಹುದೇ?
ಲಾಭ ನೋಡಿ ಬಾಳೆ ಹಣ್ಣು ತಿಂದಂತೆ.
ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು.
ಹತ್ತು ಮಕ್ಕಳ ತಾಯಿ ದಾರಿಯಲ್ಲಿ ಸಿಕ್ಕಿದ್ದನ್ನು ತಿಂದಂತೆ.
ತಾಯಿಯನ್ನು ಹೊಡೆಯಬಾರದು, ಗುಬ್ಬಿಯ ಗೂಡನ್ನು ತೆಗೆಯಬಾರದು.
ನಾಯಿಯು ನಮ್ಮನ್ನು ಕಚ್ಚಿದರೆ ನಾಯಿಯನ್ನು ಕಚ್ಚಲು ನಮ್ಮಿಂದ ಆಗುವುದೇ?
ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
ಮೃತ್ಯು ಬಂದ ಮೇಲೆ ವೈದ್ಯ ಬಂದ.
ಶಸ್ತ್ರದಿಂದಾದ ಗಾಯ ಮಾಯುತ್ತದೆ, ನಾಲಿಗೆಯಿಂದಾದ ಗಾಯ ಮಾಯುವುದಿಲ್ಲ.
ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ ಹೇಳಿದ ಹಾಗೆ.
ರಾವಣನ ಮಾತಿಗೆ ಮನಸೋತವ, ರಾಮನ ಮಾತಿಗೆ ಜಾಣನಾಗುವನೇ?
ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.
ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
ನೀನಾಗದೆ ರಣಹೇಡಿ, ಕೀರ್ತಿ ಪಡೆ ಪ್ರಾಣ ನೀಡಿ.
ನಿನ್ನಲ್ಲಿ ನೀ ಹುಡುಕು, ಅರಿಷಡ್ವರ್ಗಗಳ ಹೊರ ಹಾಕು.
ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
ಬುದ್ಧಿ ಇದ್ದವನಲ್ಲಿ ಶ್ರದ್ಧೆ, ನಿದ್ದೆ ಬಾರದವನಲ್ಲಿ ವಿದ್ಯೆ.
ಉಗಮವಾಗದಿರಲಿ ಹಿಂಸೆ, ಹೆಚ್ಚಿಗೆಯಾಗದಿರಲಿ ಆಸೆ.
ನಾಳೆ ಎಂದವನಿಗೆ ಹಾಳು, ಇಂದೇ ಎಂದವನಿಗೆ ಬೀಳಾಗದು ಬಾಳು.
ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
ಉಂಡಿದ್ದು ಹೊಟ್ಟೆಗಾಗಿ, ಮಾಡಿದ್ದು ಬಟ್ಟೆಗಾಗಿ.
ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
ನಿನ್ನದಲ್ಲ ಸರ್ವ ಆಸ್ತಿ, ಒಳ್ಳೆಯದಲ್ಲ ಗರ್ವ ಜಾಸ್ತಿ.
ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
ಮಾಡಿ ಉಣ್ಣು ಬೇಡಿದಷ್ಟು, ತಗಾದೆ ಮಾಡದೇ ಉಣ್ಣು ನೀಡಿದಷ್ಟು.
ಒಣ ಮಾತು ಒಣಗಿದ ಹುಲ್ಲು, ಒಳ್ಳೆಯ ಮಾತು ಬೆಳ್ಳಗಿನ ಹಾಲು.
ತತ್ವದಲ್ಲಿ ಸತ್ವ ಹುಡುಕು, ವ್ಯಥೆಯಲ್ಲಿ ಕಥೆ ಹುಡುಕು.
ಇಲಿ ಸಿಕ್ಕರೆ ಬೆಕ್ಕು ಆಗುವುದು ಹುಲಿ.
ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
ಹೋಗುವುದು ಮೂಡಿದ ಹೊತ್ತು, ಹೋಗೋದಿಲ್ಲ ಆಡಿದ ಮಾತು.
ದೈವ ಕಾಡುವುದು ವಿಧಿಗಾಗಿ, ನೀರು ಸಮುದ್ರ ಸೇರುವುದು ನದಿಗಾಗಿ.
ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
ಸಲುಗೆ ಕೊಟ್ಟರೆ ಸಾಕೂ ಹೆಗ್ಗಣವೂ ಸಹ ಏರುವುದು ಹೆಗಲಿಗೆ.
ಹುಟ್ಟಿದ ಮಗು ತರುವುದು ತೊಟ್ಟಲಿಗೆ ನಗು.
ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
ಬೇಸರವಿರಬಾರದು, ಅವಸರ ಮಾಡಬಾರದು.
ಎಚ್ಚರ ತಪ್ಪಿ ಮಾತನಾಡಬಾರದು, ಹುಚ್ಚನಂತೆ ವರ್ತಿಸಬಾರದು.
ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
ಗದ್ದೆ ಸುಟ್ಟರೂ ಹಾಳಾಗದು ಗಾದೆ.
ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
ಮಾಟ ಮಾಡಿದೋನ ಮನೆ ಹಾಳು.
ಒಬ್ಬರ ಕೂಳು ಇನ್ನೊಬ್ಬರ ಕುತ್ತು.
ಒಳಿತಾಗಿ ಮುಗಿದಿದ್ದೆಲ್ಲವೂ ಒಳ್ಳೆಯದೇ.
ಹೊಳೆಯುವುದೆಲ್ಲಾ ಚಿನ್ನವಲ್ಲ.
ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
ಬರಿಗೈಯವರ ಬಡಿವಾರ ಬಹಳ.
ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
ಸ್ವರ್ಗದಲ್ಲಿ ಸೇವೆಗೈಯುವುದಕ್ಕಿಂತ ನರಕದಲ್ಲಿ ಆಳುವುದೇ ಲೇಸು.
ಅರೆಗೊಡದ ಅಬ್ಬರವೇ ಬಹಳ.
ಮರಿ ಮಾಡುವ ಮೊದಲೇ ಮೊಟ್ಟೆಗಳನ್ನು ಎಣಿಸಬೇಡ.
ಆಪತ್ತಿಗಾದವನೇ ನಿಜವಾದ ಗೆಳೆಯ.
ಇಂದಿನ ಸೋಲು ನಾಳಿನ ಗೆಲುವು.
ಧೈರ್ಯವಿದ್ದವನಿಗೆ ದೈವವೂ ಅನುಕೂಲ.
ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
ಪ್ರಯತ್ನಕ್ಕೆ ಪರಮೇಶ್ವರನೂ ಸಹಾಯ ಮಾಡುವನು.
ಉತ್ತಮವಾದ ನಗು ನೇಸರನ ಮಗು.
ಸದಾಚಾರಣೆಯ ಉದಾಹರಣೆಯೇ ಉತ್ತಮವಾದ ಉಪದೇಶ.
ಪ್ರಾಮಾಣಿಕತೆಯಿಂದಲೇ ಪಾರಮಾರ್ಥ.
ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
ಉದ್ದುದ್ದ ಮಾತಿನವರ ಮೊಳಕೈ ಮೊಂಡ.
ಕಿಡಿ ಸಣ್ಣದಾದರೂ ಕಾಡೆಲ್ಲವನ್ನು ಸುಡುತ್ತದೆ.
ನೋಡಿ ನಡೆದವರಿಗೆ ಕೇಡಿಲ್ಲ.
ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
ಚಿಂತೆ ಮಾಡಿದರೆ ಸಂತೆ ಸಾಗೀತೆ?
ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
ತಾಯಿ ಬೇಕು ಇಲ್ಲವೇ ಬಾಯಿ ಬೇಕು.
ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.
ಹಾರುವನ ತೊತ್ತಾಗಬೇಡ ಗಾಣಿಗನ ಎತ್ತಾಗಬೇಡ.
ಮಂತ್ರಕ್ಕಿಂತ ಉಗುಳೇ ಹೆಚ್ಚು.
ಹಂಪಿಗೆ ಹೋಗುವುದಕ್ಕಿಂತ ಕೊಂಪೆಯಲ್ಲಿರುವುದೇ ಲೇಸು.
ಎಡಗಣ್ಣು ಹೊಡೆದರೆ ನಾರಿಗೆ ಶುಭ.
ಊಟವೆಂದರೆ ಊರು ಬಿಟ್ಟುಹೋದಂತೆ.
ಎಲ್ಲ ಮುಗಿದ ಮೇಲೆ ತೀರ್ಥಯಾತ್ರೆಗೆ ಹೊರಟಂತೆ.
ಒಗ್ಗಟ್ಟಿಲ್ಲದ ಊರಲ್ಲಿ ಒಪ್ಪತ್ತೂ ಇರಬೇಡ.
ಒಕ್ಕಣ್ಣ ತನಗೆ ಹತ್ತು ಕಣ್ಣು ಅಂತಿದ್ನಂತೆ.
ಕಣ್ಣಿಗೂ ಮೂಗಿಗೂ ಮೂರು ಗಾವುದ.
ಕಲಹವೇ ಕೇಡಿಗೆ ಮೂಲ.
ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
ನಾಲಿಗೆಯಿಂದ ಕೆಳಗೆ ಬಿದ್ದರೆ ನರಕ.
ವೇದ ಸುಳ್ಳಾದರು ಗಾದೆ ಸುಳ್ಳಾಗದು.
ಅಡಿಕೆಗೆ ಹೋದ ಮಾನ ಆನೆ ಕೊಟ್ಟರು ಬರಲ್ಲ.
ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
ಕೈ ಕೆಸರಾದರೆ ಬಾಯಿ ಮೊಸರು.
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತ?
ಹೆಣ್ಣಿಗೆ ಹಟವಿರಬಾರದು, ಗಂಡಿಗೆ ಚಟವಿರಬಾರದು.
ಮಾತು ಬೆಳ್ಳಿ, ಮೌನ ಬಂಗಾರ.
ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
ಮಂಗ ಮೊಸರು ತಿಂದು ಮೇಕೆ ಬಾಯಿಗೆ ಸವರಿದ ಹಾಗಾಯಿತು.
ಮನೆಗೆ ಮಾರಿ, ಊರಿಗೆ ಉಪಕಾರಿ.
ಆಳಾಗಬಲ್ಲವನು ಅರಸನಾಗಬಲ್ಲ.
ಊರಿಗೆ ದೊರೆ ಆದರೂ ತಾಯಿಗೆ ಮಗನೆ.
ಹೆತ್ತವರಿಗೆ ಹೆಗ್ಗಣ ಮುದ್ದು.
ಊರೆಲ್ಲ ದೋಚಿಕೊಂಡು ಹೋದಮೇಲೆ ದೊಡ್ಡಿ (ಕೋಟೆ) ಬಾಗಿಲು ಹಾಕಿದರಂತೆ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ.
ಮನಸಿದ್ದರೆ ಮಾರ್ಗ.
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
ಅಕ್ಕಿ ಮೇಲೆ ಆಸೆ ನೆಂಟರ ಮೇಲೆ ಇಷ್ಟ.
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡಂತೆ.
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ.
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.
ಚಿಂತೆ ಇಲ್ಲದವನಿಗೆ ಸನ್ತೇಲು ನಿದ್ದೆ.
ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.
ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ.
ತುಂಬಿದ ಕೊಡ ತುಳುಕುವುದಿಲ್ಲ.
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಹನಿ ಹನಿ ಸೇರಿದರೆ ಹಳ್ಳ, ತೆನೆ ತೆನೆ ಸೇರಿದರೆ ಬಳ್ಳ.
ನಾಯಿನ ಕರೆದುಕೊಂಡು ಹೋಗಿ ಸಿಂಹಾಸಾನದ ಮೇಲೆ ಕೂರಿಸಿದ ಹಾಗಯ್ತು.
ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಹಾಸಿಗೆ ಇದ್ದಷ್ಟು ಕಾಲು ಚಾಚು
ಬೀದೀಲಿ ಹೊಗೊ ಮಾರೀನ ಮನೆಗೆ ಕರೆದಂಗೆ
ಮಾಡಿದುಣ್ಣೊ ಮಾರಾಯ
ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೆಕು
ಯಾರದೊ ದುಡ್ಡಿನಲ್ಲಿ ಯೆಲ್ಲಮನ್ನ ಜಾತ್ರೆ
ಆಗೊದೆಲ್ಲ ವೊಳ್ಳೆದಕ್ಕೆ
ಗಂಡ-ಹೆಂಡಿರ ಜಗಳ ತಿಂದು ಮಲುಗೊ ವರೆಗೆ
ಕಾಲಕ್ಕೆ ತಕ್ಕಂತೆ ನಡಿಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
ಅನ್ನ ಹಾಕಿದ ಮನೆಗೆ ಕನ್ನ ಹಕಬೇಡ
ಮಾರಿ ಕಣ್ಣು ಹೋರಿ ಮ್ಯಾಲೆ, ಕಟುಕನ್ ಕಣ್ಣು ಕುರಿ ಮ್ಯಾಲೆ.
ಪಾಲಿಗೆ ಬಂದದ್ದೆ ಪರಮಾನ್ನ.
ಸಾವಿರ ಸುಳ್ಳು ಹೇಲಿ ಒಂದು ಮದುವೆ ಮಾಡು
ಕಳ್ಳನ ನಂಬಿದ್ರು ಕುಳ್ಳನ ನಂಬಬೇಡ
ನೆಲಕ್ಕೆ ಬಿದ್‍ದ್ರೂ ಮೀಸೆ ಮಣ್ಣಾಗಿಲ್ಲ
ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೊ
ದೇವರು ಒಲಿದರೂ ಪೂಜಾರಿ ಒಲಿಯೊಲ್ಲ.
ನಮ್ಮ ದೇವರ ಸತ್ಯ ನಮಗೆ ಗೊತ್ತು.
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
ಕೈ ಕೆಸರಾದರೆ ಬಾಯಿ ಮೊಸರು.
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.
ರೋಗಿ ಬಯಸಿದ್ದು ಹಾಲು-ಅನ್ನ ವೈದ್ಯ ಹೇಳಿದ್ದು ಹಾಲು-ಅನ್ನ
ಕಳ್ಳನಿಗೊಂದು ಪಿಳ್ಳೆ ನೆವ
ಕುಣಿಯಲಾರದವಳು ನೆಲ ಡೊಂಕು ಅಂದಳಂತೆ
ಹೋದೆಯಾ ಪಿಶಾಚಿ ಅಂದ್ರೆ ಬಂದೆಯಾ ಗವಾಕ್ಷೀಲಿ
ಹೋದ ಪುತ್ತ ಬಂದ ಪುತ್ತ ಪುಟ್ಟನ ಕಾಲಿಗೆ ನೀರಿಲ್ಲ
ಶಿವ ಪೂಜೇಲಿ ಕರಡಿ ಬಿಟ್ಟಂಗೆ
ಸೋದರ ಮಾವನ ಚಾಳು ತುಂಡಪುಂಡರ ಪಾಲು
ನೆಂಟರೆಲ್ಲ ಖರೆ, ಕಂಟಲೆ ಚೀಲಕ್ಕೆ ಕೈ ಹಾಕಬೇಡ
ಅಂಗೈ ಹುಣ್ಣಿಗೆ ಕನ್ನಡಿ ಯಾಕೆ
ಅಕ್ಕ ಸತ್ತರೆ ಅಮಾಸೆ ನಿಲ್ಲದು, ಅಣ್ಣ ಸತ್ತರೆ ಹುಣ್ಣಿಮೆ ನಿಲ್ಲದು
ಹುಣ್ಣಿಮೆ ಬರುವನಕ ಅಮಾಸೆ ನಿಲ್ಲದು, ಅಮಾಸೆ ಬರುವನಕ ಹುಣ್ಣಿಮೆ ನಿಲ್ಲದು
ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು
ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ
ಮಕ ನೋಡಿ ಮಾರು ಹೋದ, ಗುಣ ನೋಡಿ ದೂರ ಹೋದ
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
ಅಪ್ಪಂತೋನಿಗೆ ಇಪ್ಪತ್ತೊಂದು ಕಾಯಿಲೆ
ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ
ಪಾಪ ಅಂದ್ರೆ ಕರ್ಮ ಬರ್ತದೆ
ಅರಸು ಆದೀಕ (=ಆದಾಯ) ತಿಂದ, ಪರದಾನಿ ಹೂಸು ಕುಡಿದ
ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಇಟ್ಟುಕೊಂಡಾಕಿ ಇರೂತನ ಕಟ್ಟಿಕೊಂಡಾಕಿ ಕಡೀತನ
ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
ಹರುವಯ್ಯನ ಎಲೆ ಇಂಬ, ಒಕ್ಕಲಿಗನ ಮನೆ ಇಂಬ
ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
ಇದ್ದವರು ಇದ್ದಹಾಗೆ ಸಿದ್ಧಾ ದೇವಿಗೆ ಸಿಡಿಲು ಬಡೀತು
ಅಂದು ಬಾ ಅಂದ್ರೆ ಮಿಂದು ಬಂದ
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
ಅಜ್ಜ! ಮದುವೆ ಅಂದ್ರೆ ನನಗೋ ಅಂದ
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಅಕ್ಕನ ಹಗೆ ಬಾವನ ನೆಂಟು
ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
ಅಕ್ಕ ಬರಬೇಕು ಅಕ್ಕಿ ಮುಗೀಬಾರದು
ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ಅಗಸನ ಬಡಿವಾರವೆಲ್ಲ ಹೆರರ ಬಟ್ಟೆ ಮೇಲೆ
ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ
ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
ಅಜ್ಜಿಗೆ ಅರಿವೆಯ ಚಿಂತೆ, ಮಗಳಿಗೆ ಗಂಡನ ಚಿಂತೆ, ಮೊಮ್ಮಗಳಿಗೆ ಕಜ್ಜಾಯದ ಚಿಂತೆ
ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು
ಅಡವಿಯ ದೊಣ್ಣೆ ಪರದೇಸಿಯ ತಲೆ
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ
ಅತಿ ಆಸೆ ಗತಿಗೇಡು
ಅತ್ಯಾಶ ಬಹುದುಃಖಾಯ ಅತಿ ಸರ್ವತ್ರ ವರ್ಜಯೇತ್
ಅತಿ ಸ್ನೇಹ ಗತಿ ಕೇಡು
ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
ಅನ್ಯಾಯದಿಂದ ಗಳಿಸಿದ್ದು ಅಸಡ್ಡಾಳಾಗಿ ಹೋಯ್ತು
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
ಅರಗಿನಂತೆ ತಾಯಿ, ಮರದಂತೆ ಮಕ್ಕಳು
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
ಅರೆಪಾವಿನವರ ಅಬ್ಬರ ಬಹಳ
ಅಲ್ಪರ ಸಂಗ ಅಭಿಮಾನ ಭಂಗ
ಅಳಿವುದೇ ಕಾಯ ಉಳಿವುದೇ ಕೀರ್ತಿ
ಆವು ಕಪ್ಪಾದ್ರೆ ಹಾಲು ಕಪ್ಪೇನು
ಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದ
ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ
ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
ಆಡೋದು ಮಡಿ ಉಂಬೋದು ಮೈಲಿಗೆ
ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
ಆಲಸ್ಯಂ ಅಮೃತಂ ವಿಷಂ
ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
ಆಸೆಗೆ ಕೊನೆಯಿಲ್ಲ
ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
ಹೆತ್ತವರಿಗೆ ಅಂಬಲಿ ಬಿಡದಿದ್ದರೂ, ಹಂಬಲ ಬಿಡದಿದ್ದರೆ ಸಾಕು
ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
ಹೇಳಿಕೆ ಮಾತು ಕೇಳಿ ಹೆಂಡ್ರನ್ನ ಬಿಟ್ಟ
ಸಾದೆತ್ತಿಗೆ ಎರಡು ಹೇರು (ಹೊರೆ)
ಹೆತ್ತವರು ಹೆಸರಿಕ್ಕ ಬೇಕು
ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
ಕತೆ ಹೇಳೋಕೆ ಹ್ಞುಂ-ಗುಟ್ಟೋರಿರಬೇಕು, ನೆಟ್ಟಗೆ ಬಾಳೋಕೆ ಛೀ-ಗುಟ್ಟೋರಿರಬೇಕು
ಕಳ್ಳನ ಮನಸ್ಸು ಹುಳ್ಳಗೆ
ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
ಅನ್ನ ಇಕ್ಕಿ ಸಾಕು ಅನ್ನಿಸ ಬಹುದು, ದುಡ್ಡು ಕೊಟ್ಟು ಸಾಕು ಅನ್ನಿಸೋಕಾಗಲ್ಲ
ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
ಊರಿಗಾಗದ ಗೌಡ, ಮೇಲೆರಗುವ ಗಿಡುಗ
ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
ಯೋಗ ಇದ್ದಷ್ಟೇ ಭೋಗ
ಹಾಕ್ಮಣೆ, ನೂಕ್ಮಣೆ, ಯಾಕ್ಮಣೆ
ತೇಗಿ ತೇಗಿ ಬೀಗಿ ಬಿದ್ದ
ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
ಹೋದ ಬದುಕಿಗೆ ಹನ್ನೆರಡು ದೇವರು
ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
ಇಕ್ಕಲಾರದ ಕೈ ಎಂಜಲು
ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
ಇಡೀ ಮುಳುಗಿದರೂ ಮೂಗು ಮೇಲೆ
ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
ನಿಜ ಆಡಿದರೆ ನಿಷ್ಠೂರ
ಇದ್ದದ್ದು ಹೋಯಿತು ಮದ್ದಿನ ಗುಣದಿಂದ
ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
ತನ್ನೂರಲಿ ರಂಗ, ಪರೂರಲಿ ಮಂಗ
ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಮದುವೆ ಮಡಿನೋಡು ಮನೆ ಕಟ್ಟಿ ನೋಡು
ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
ಮಾತು ಬೆಳ್ಳಿ, ಮೌನ ಬಂಗಾರ
ಕೈ ಕೆಸರಾದ್ರೆ ಬಾಯಿ ಮೊಸರು
ಸಂಸಾರಿ ಸಾವಾಸ ಮಾಡಿ ಸನ್ಯಾಸಿ ಕೆಟ್ಟ
ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
ಮುತ್ತು ಒಡೆದರೆ ಹೋಯ್ತು, ಮಾತು ಆಡಿದರೆ ಹೋಯ್ತು
ತುಂಬಿದ ಕೊಡ, ತುಳುಕೋದಿಲ್ಲ
ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
ಮದುವೆಯಾಗೋ ಗುಂಡ ಅಂದ್ರೆ ನೀನೇ ನನ್ನ ಹೆಂಡ್ತಿ ಅಂದ
ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ
ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
ಹಾಳೂರಿಗೆ ಉಳಿದವನೇ ಗೌಡ
ಹಿರೀಅಕ್ಕನ ಚಾಳಿ ಮನೆ ಮಕ್ಕಳಿಗೆಲ್ಲಾ
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ಜನ ಮರುಳೋ ಜಾತ್ರೆ ಮರುಳೋ
ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
ಕೋಪದಲ್ಲಿ ಕುಯ್ದ ಮೂಗು ಶಾಂತಿಯಲ್ಲಿ ಬಂದೀತೇ
ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
ನಾಯಿ ಬೊಗಳಿದರೆ ದೇವಲೋಕ ಹಾಳೇನು
ನಾಯಿ ಬಾಲ ಡೊಂಕು
ಓದಿ ಓದಿ ಮರುಳಾದ ಕೂಚು ಭಟ್ಟ
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಪಾಪಿ ಸಮುದ್ರ ಹೊಕ್ರೂ ಮೊಣಕಾಲುದ್ದ ನೀರು
ರಾಮೆಶ್ವರಕ್ಕೆ ಹೋದ್ರೂ ಶನೀಶ್ವರನ ಕಾಟ ತಪ್ಪಲಿಲ್ಲ
ಸಾವಿರ ಸುಳ್ಳು ಹೇಳಿ ಒಂಡು ಮಡುವೆ ಮಾಡು
ಬೇಲಿನೆ ಎದ್ದು ಹೊಲ ಮೇಯಿತಂತೆ
ಭಂಗಿ ದೇವರಿಗೆ ಹೆಂಡಗುಡುಕ ಪೂಜರಿ
ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
ಎತ್ತು ಈಯಿತು ಅನ್ದರೆ ಕೊಟ್ಟಿಗೆಗೆ ಕಟ್ಟು ಎನ್ದರಂತೆ
ಗಂಡ ಹೆಂಡಿರ ಜಗಳ ಉನ್ಡು ಮಲಗೊ ತನಕ
ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
ಮುಳ್ಳಿನಿಂದ ಮುಳ್ಳು ತೆಗೆ, ಹಗೆಯಿಂದ ಹಗೆ ತೆಗೆ
ಆನೆಯಂಥದೂ ಮುಗ್ಗರಿಸ್ತದೆ
ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
ಹೆರಿಗೆ ಬೇನೆ ಕೆಲ ಗಂಟೆ ಗಂಟ, ಬಂಜೆ ಬೇನೆ ಬದುಕಿನ ಗಂಟ
ಕಟ್ಟಿದ ಕೆರೆಗೆ ಕೋಡಿ ತಪ್ಪಲ್ಲ, ಹುಟ್ಟಿದ ಮನೆಗೆ ಬೇರೆ(ಪಾಲಗುವುದು) ತಪ್ಪಲ್ಲ
ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
ವಶಗೆಡದೆ ಹಸಗೆಡಲ್ಲ
ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
ರಾಜ ಇರೋತನಕ ರಾಣಿ ಭೋಗ
ರಾತ್ರಿ ಕಂಡ ಬಾವೀಲಿ ಹಗಲು ಬಿದ್ದಂಗೆ
ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
ಲಾಭವಿಲ್ಲದ ವ್ಯಾಪಾರ ಕತ್ತೆ ಮೈ ಪರಚಿದಂಗೆ
ಲಿಂಗ ಹರಿದ ಮೇಲೆ ಜಂಗಮನ ಹಂಗೇನು
ಲೋಕ ತಿಳಿಯಬೇಕು ಲೆಕ್ಕ ಕಲಿಯಬೇಕು
ವಿನಾಶ ಕಾಲಕ್ಕೆ ವಿಪರೀತ ಬುದ್ಧಿ
ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
ಶಿವರಾತ್ರಿ ಮನೆಗೆ ಏಕಾದಶಿ ಬಂದಂಗೆ
ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
ಸಮಯಕ್ಕೆ ಬಾರದ ಬುದ್ಧಿ ಸಾವಿರ ಇದ್ದರೂ ಲದ್ಧಿ
ಸಮುದ್ರದ ನೆಂಟಸ್ತನ ಉಪ್ಪಿಗೆ ಬಡತನ
ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
ಸಂತೇಲಿ ಮಂತ್ರ ಹೇಳಿದಂಗೆ
ಸಂದೀಲಿ ಸಮಾರಾಧನೆ ಮಾಡ್ದಂಗೆ
ಸಾಯ್ತಿನಿ ಸಾಯ್ತಿನಿ ಅಂತ ಸಾವಿರ ಕೋಳಿ ತಿಂದನಂತೆ
ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
ಸಾಯೋ ಮುಂದೆ ಸಕ್ಕರೆ ತುಪ್ಪ ತಿನಿಸಿದರಂತೆ
ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
ಸಾಲಗಾರ ಸುಮ್ಮನಿದ್ದರೂ ಸಾಕ್ಷಿದಾರ ಸುಮ್ಮನಿರ
ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
ಸಾವಿರ ಕೊಟ್ಟರೂ ಸವತಿ ಮನೆ ಬೇಡ
ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
ಸಾವಿರ ವರ್ಷ ಸಾಮು ಮಾಡಿ ಸಾಯೋ ಮುದುಕಿ ಸೊಂಟ ಮುರಿದ
ಸುಳ್ಳು ದೇವರಿಗೆ ಕಳ್ಳ ಪೂಜಾರಿ
ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
ಸೂಜಿಯಷ್ಟು ಬಾಯಿ ಗುಡಾಣದಷ್ಟು ಹೊಟ್ಟೆ
ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
ಹಣ್ಣು ತಿಂದೋನು ನುಣುಚಿ ಕೊಂಡ ಸಿಪ್ಪೆ ತಿಂದೋನು ಸಿಗ್ಹಾಕೊಂಡ
ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
ಹತ್ತು ಕಟ್ಟುವಲ್ಲಿ ಒಂದು ಮುತ್ತು ಕಟ್ಟು
ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
ಹತ್ತು ತಿಂಗಂಳ ಪುಟ್ಟ ಹಟ್ಟೆಲ್ಲಾ ಹೆಜ್ಜೆ
ಹತ್ತು ಮಕ್ಕಳ ತಾಯಾದರೂ ಸತ್ತ ಮಗನ್ನ ಮರೆಯೊದಿಲ್ಲ
ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು
ಹರಿದಿದ್ದೇ ಹಳ್ಳ ನಿಂತಿದ್ದೇ ತೀರ್ಥ
ಹರೆ ಬಡಿದರೂ ಮದುವೆ ಮೊರ ಬಡಿದರೂ ಮದುವೆ
ಹರೆಯಕ್ಕೆ ಬಂದಾಗ ಹಂದಿನೂ ಚಂದ
ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
ಹಲ್ಲುಬಿದ್ದ ಮುದುಕಿ ಎಲ್ಲಿ ಬಿದ್ದರೇನು
ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
ಹಸಿದು ಹಲಸಿನ ಹಣ್ಣು ತಿನ್ನು ಉಂಡು ಮಾವಿನ ಹಣ್ಣು ತಿನ್ನು
ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
ಹಂದಿ ತನ್ನ ಚಂದಕ್ಕೆ ವೃಂದಾವನ ಆಡ್ಕೊಣ್ತು
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
ಹಾಲಪ್ಪ ಅಂತ ಹೆಸರಿದ್ದರೂ ಮಜ್ಜಿಗೆಗೆ ಗತಿ ಇಲ್ಲ
ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
ಹಿಟ್ಟು ಹಳಸಿತ್ತು ನಾಯೂ ಹಸಿದಿತ್ತು
ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
ಹಿತ್ತಲ ಗಿಡ ಮದ್ದಲ್ಲ ಹತ್ತರ ಮಾತು ರುಚಿಯಲ್ಲ
ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
ಹುಟ್ಟಿದ ಮನೆ ಹೋಳಿಹುಣ್ಣಿಮೆ ಕೊಟ್ಟ ಮನೆ ಶಿವರಾತ್ರಿ
ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ
ಹುತ್ತ ಬಡಿದರೆ ಹಾವು ಸಾಯುವುದೇ
ಹುಬ್ಬೆ ಮಳೇಲಿ ಬಿತ್ತಿದರೆ ಹುಲ್ಲೂ ಇಲ್ಲ ಕಾಳೂ ಇಲ್ಲ
ಹುಳ್ಳಿಕಾಳೂ ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
ಹೆಡ್ಡಾಳಾದ್ರೂ ದೊಡ್ಡಾಳು ಮೇಲು
ಹೆಣ್ಣು ಚಂದ ಕಣ್ಣು ಕುಲ್ಡು ಅಂದಂಗೆ
ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
ಹೇಳೊದು ವೇದ ಹಾಕೊದು ಗಾಳ
ಹೊಟ್ಟೆ ತುಂಬಿದ ಮೇಲೆ ಹುಗ್ಗಿ ಮುಳ್ಳು ಮುಳ್ಳು
ಗಾಳಿ ಬಂದಾಗ ತೂರಿಕೊ, ಧಾರಣೆ ಬಂದಾಗ ಮಾರಿಕೊ
ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
ಕಂಗಾಲಾದರೂ ಹಂಗಾಳಾಗಬಾರದು
ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
ಎಂಟು ವರ್ಷಕ್ಕೆ ನನ್ನ ಮಗ ದಂಟಾದ
ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
ದಾಯವಾಗಿ(=ದಾನವಾಗಿ) ಸಿಕ್ಕಿದರೆ, ನನಗೆ ಒಂದಿರಲಿ ನಮ್ಮಪ್ಪನಿಗೆ ಒಂದಿರಲಿ
ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
ಬಾಯ್ ತೆವಲು ತೀರಿಸಿಕೊಳ್ಳೋಕೆ ಎಲೆ ಅಡಿಕೆ ಬೇಕು, ಮೈ ತೆವಲು ತೀರಿಸಿಕೊಳ್ಳೋಕೆ ಒಡಂಬಡಿಕೆ ಬೇಕು
ತೂತು ಗತ್ತಲೇಲಿ ತಾತನ ಮದುವೆ
ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
ತಾಳ ತಪ್ಪಿದ ಬಾಳು, ತಾಳಲಾರದ ಗೋಳು
ಅವರವರ ತಲೆಗೆ ಅವರವರದೇ ಕೈ
ಡಂಬು (=ಬೂಟಾಟಿಕೆ) ನನ್ನ ಕೇಳು, ಡಬ್ಬು ನನ್ನ ಹೆಂಡ್ರನ್ನ ಕೇಳು
ಉಂಡ ಮನೆ ಜಂತೆ ಎಣಿಸಬಾರದು
ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
ಕ್ರಮ ಕಾಣದ ನಾಯಿ ಕಪಾಳೆ ನೆಕ್ತು
ಸೊಪ್ಪುಸೆದೆ ತಿನ್ನೋರ ಒಪ್ಪ ನೋಡು, ತುಪ್ಪತೊಗೆ ತಿನ್ನೋರ ರಂಪ ನೋಡು
ಎಲ್ಲರ ಹಲ್ಲೊಳಗೆ ನುರಿದು ಹೋಗೋದಕ್ಕಿಂತ ಒಣಗಿದ ಹುಲ್ಲೊಳಗೆ ಉರಿದು ಹೋಗೋದು ವಾಸಿ
ಹಣ ಎರವಲು ತಂದು ಮಣ ಉರುವಲು ಕೊಂಡ
ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
ಉಂಡದ್ದು ಊಟ ಆಗಲಿಲ್ಲ, ಕೊಂಡದ್ದು ಕೂಟ ಆಗಲಿಲ್ಲ
ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
ಹೊಳೆಗೆ ಸುರಿದರೂ ಅಳೆದು ಸುರಿ
ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
ಉಂಬಾಗ ಉಡುವಾಗ ಊರೆಲ್ಲ ನೆಂಟರು
ಉಂಬೋಕೆ ಉಡೋಕೆ ಅಣ್ಣಪ್ಪ ಕೆಲಸಕ್ಕಷ್ಟೇ ಇಲ್ಲಪ್ಪ
ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
ಉಡೋಕೆ ಇಲ್ಲದವ ಮೈಲಿಗೆಗೆ ಹೇಸ, ಉಂಬೋಕೆ ಇಲ್ಲದವ ಎಂಜಲಿಗೆ ಹೇಸ
ಉತ್ತಮನು ಎತ್ತ ಹೋದರೂ ಶುಭವೇ
ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
ಕೃಷಿತೋನಾಸ್ತಿ ದುರ್ಭಿಕ್ಷಂ
ಉದ್ಯೋಗವೇ ಗಂಡಸಿಗೆ ಲಕ್ಷಣ
ಉರಿಯೋ ಬೆಂಕೀಲಿ ಎಣ್ಣೆ ಹೊಯಿದ ಹಾಗೆ
ಊರು ದೂರಾಯಿತು ಕಾಡು ಹತ್ತರಾಯಿತು
ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
ಎಡವಿದ ಕಾಲು ಎಡವುದು ಹೆಚ್ಚು
ಎರಡು ದಾಸರ ನಂಬಿ ಕುರುಡು ದಾಸ ಕೆಟ್ಟ
ಎರಡೂ ಕೈ ತಟ್ಟಿದರೆ ಸದ್ದು
ಎಲ್ಲರೂ ಪಾಲಕೀಲಿ ಕೂತರೆ ಹೊರೋರು ಯಾರು
ಎಲ್ಲಾ ಬಣ್ಣ ಮಸಿ ನುಂಗಿತು
ಏರಿದವ ಇಳಿದಾನು
ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
ಒಕ್ಕಣ್ಣರ ನಾಡಿಗೆ ಹೋದ್ರೆ ಒಂದು ಕಣ್ಣು ಮುಚ್ಚಿ ನಡೆಯಬೇಕು
ಒಂಡಂಬಡಿಕೆ ಇಂದ ಆಗದು ದಡಂಬಡಿಕೆ ಇಂದ ಆದೀತೇ
ನಯಶಾಲಿ ಆದವನು ಜಯಶಾಲಿ ಆದಾನು
ಒಂದು ಹೊತ್ತು ಉಂಡವ ಯೋಗಿ ಎರಡು ಹೊತ್ತು ಉಂಡವ ಭೋಗಿ ಮೂರು ಹೊತ್ತು ಉಂಡವ ರೋಗಿ ನಾಲ್ಕು ಹೊತ್ತು ಉಂಡವ ಎತ್ತುಕೊಂಡು ಹೋಗಿ
ಒಲ್ಲದ ಗಂಡಗೆ ಬೆಣ್ಣೇಲಿ ಕಲ್ಲು
ಬಾಯಲ್ಲಿ ಬೆಲ್ಲ ಕರುಳು ಕತ್ತರಿ
ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ
ಕಂಡವರ ಮಕ್ಕಳನ್ನು ಬಾವಿಯಲ್ಲಿ ದೂಡಿ ಆಳ ನೋಡಿದ ಹಾಗೆ
ಬೀದೀ ಕೂಸು ಬೆಳೀತು ಕೋಣೇ ಕೂಸು ಕೊಳೀತು
ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
ಕಡು ಕೋಪ ಬಂದಾಗ ತಡಕೊಂಡವನೇ ಜಾಣ
ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
ಕಬ್ಬು ಡೊಂಕಾದ್ರೆ ಸವಿ ಡೊಂಕೇ
ಕಲ್ಲು ಇದ್ದಾಗ ನಾಯಿ ಇಲ್ಲ ನಾಯಿ ಇದ್ದಾಗ ಕಲ್ಲು ಇಲ್ಲ
ಕಳ್ಳನ ಹೆಜ್ಜೆ ಕಳ್ಳನೇ ಬಲ್ಲ
ಹಣ ಇಲ್ಲದವ ಹೆಣಕ್ಕಿಂತ ಕಡೆ
ಕಿಡಿಯಿಂದ ಕಾಡ ಸುಡ ಬಹುದು
ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
ಕೀಲು ಸಣ್ಣದಾದರೂ ಗಾಲಿ ನಡೆಸುತ್ತದೆ
ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
ಕೊಡಲಿ ಕಾವು ಕುಲಕ್ಕೆ ಸಾವು
ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಅಡಿಗೆ ಬಿದ್ಫರೂ ಮೀಸೆ ಮೇಲೆ
ನೀರಿಳಿಯದ ಗಂಟಲಲ್ಲಿ ಕಡುಬು ತುರುಕಿದಂತೆ
ಬಂಟರ ಅಬ್ಬರ ಸೇವಿನ ಗೊಬ್ಬರ
ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?
ಸರಿಸುಮಾರಾಗಿ ಸಮಾನಾರ್ಥಕ ಗಾದೆಗಳು
ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಿಗೆ ಹೋಗಿ ಮೊಳ ಹಾಕಿದರು
ಧರ್ಮಕ್ಕೆ ಕೊಟ್ಟ ಆಕಳ ಹಲ್ಲು ಎಣಿಸಿದರು
ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
ಮಳೆ ಹುಯ್ದರೆ ಕೇಡಲ್ಲ; ಮಗ ಉಂಡರೆ ಕೇಡಲ್ಲ
ಮಘೆ ಮಳೆ ಬಂದಷ್ಟೂ ಒಳ್ಳೇದು, ಮನೆ ಮಗ ಉಂಡಷ್ಟೂ ಒಳ್ಳೇದು
ಓದಿ ಓದಿ ಮರುಳಾದ ಕೂಚು ಭಟ್ಟ; ಓದದೆ ಅನ್ನ ಕೊಟ್ಟ ನಮ್ಮ ರೈತ
ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು
ಕಾಸಿಗೆ ತಕ್ಕ ಕಜ್ಜಾಯ.
ಕಂತೆಗೆ ತಕ್ಕ ಬೊಂತೆ
ದಕ್ಷಿಣೆಗೆ ತಕ್ಕ ಪ್ರದಕ್ಷಿಣೆ
ಅಗ್ಗದ ಮಾಲು;ಮುಗ್ಗಿದ ಜೋಳ
ಹರಯದಲ್ಲಿ ಹಂದಿ ಕೂಡ ಚೆನ್ನಾಗಿರುತ್ತೆ.
ಹೆತ್ತೋರ್ಗೆ ಹೆಗ್ಗಣ ಮುದ್ದು, ಕಟ್ಗೊಂಡೋರ್ಗೆ ಕೋಡಂಗಿ ಮುದ್ದು.
ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ನೀರು
ರಾಮೇಶ್ವರಕ್ಕೆ ಹೋದರೂ ಶನೇಶ್ವರನ ಕಾಟ ತಪ್ಪಲಿಲ್ಲ
ನಮಸ್ಕಾರ ಮಾಡಲು ಹೋಗಿ ದೇವಸ್ಥಾನದ ಗೋಪುರ ತಲೇ ಮೇಲೆ ಬಿತ್ತು
ಊರು ಸುಟ್ಟರೂ ಹನುಮಂತರಾಯ ಹೊರಗೆ
ನಮಾಜು ಮಾಡಲು ಹೋಗಿ ಮಸೀದಿ ಕೆಡವಿಕೊಂಡ ಹಾಗೆ
ಮಾಡಿದ್ದುಣ್ಣೋ ಮಹರಾಯ
ಉಪ್ಪು ತಿಂದವನು ನೀರು ಕುಡಿಯಲೇ ಬೇಕು
ತಾ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಹಾಳು
ಅಟ್ಟ ಮೇಲೆ ಒಲೆ ಉರಿಯಿತು, ಕೆಟ್ಟ ಮೇಲೆ ಬುದ್ಧಿ ಬಂತು
ಊರು ಸೂರೆ ಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ
ಹಾವು ಸಾಯಬಾರದು , ಕೋಲು ಮುರೀಬಾರದು
ಅಕ್ಕಿ ಮೇಲೆ ಆಸೆ, ನೆಂಟರ ಮೆಲೆ ಪ್ರೀತಿ
ಬಲ್ಲವನೇ ಬಲ್ಲ ಬೆಲ್ಲದ ರುಚಿಯ
ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ
ತೋಟ ಶೃಂಗಾರ, ಒಳಗೆ ಗೋಣಿ ಸೊಪ್ಪು
ಹೊರಗೆ ಥಳುಕು, ಒಳಗೆ ಹುಳುಕು
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕಂಡನಂತೆ
ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ
ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೆ ? ಆಕಳು ಕಪ್ಪಾದರೂ ಹಾಲು ಕಪ್ಪೆ ?
ಕಬ್ಬು ಡೊಂಕಾದರೆ ಸಿಹಿ ಡೊಂಕೆ ?
ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ
ಗೋರ್ಕಲ್ಲ ಮೇಲೆ ಮಳೆಗರೆದಂತೆ
ಸುಂಕದವನ ಮುಂದೆ ಸುಖದುಃಖವೇ
ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದಂತೆ
ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ
ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ
ಊರಿಗೆಲ್ಲಾ ಒಬ್ಬಳೇ ಪದ್ಮಾವತಿ
ಹಾಳೂರಿಗೆ ಉಳಿದವನೇ ಗೌಡ
ಅಳಿದೂರಿಗೆ ಉಳಿದವನೇ ಗೌಡ
ತನ್ನ ಓಣೀಲಿ ನಾಯಿಯೇ ಸಿಂಹ
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ಗಾಳಿ ಬಂದಾಗ ತೂರಿಕೋ
ಹುಚ್ಚುಮುಂಡೆ ಮದುವೇಲಿ ಉಂಡವನೇ ಜಾಣ
ಕೊಟ್ಟವನು ಕೋಡಂಗಿ; ಇಸ್ಕೊಂಡೋನು ಈರಭದ್ರ
ಕಾಸಿದ್ರೆ ಕೈಲಾಸ
ದುಡ್ಡೇ ದೊಡ್ಡಪ್ಪ,ಬುದ್ಧಿ ಅದರಪ್ಪ
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ
ಪುರಾಣ ಹೇಳೊಕೆ; ಬದನೆಕಾಯಿ ತಿನ್ನೋಕೆ
ಹೇಳೋದು ಶಾಸ್ತ್ರ, ಹಾಕೋದು ಗಾಣ
ಹೇಳೋದು ಶಾಸ್ತ್ರ,ತಿನ್ನೋದು ಬದನೆಕಾಯಿ
ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ
ಹೆಣ್ಣಿಗೆ ಹೆಣ್ಣೇ ವೈರಿ
ಗಾಯದ ಮೇಲೆ ಬರೆ ಎಳೆದಂತೆ
ಹುಣ್ಣಿನ ಮೇಲೆ ಉಪ್ಪು ಸವರಿದಂತೆ
ಅತಿ ಆಸೆ ಗತಿ ಕೇಡು
ವಿನಾಶ ಕಾಲೇ ವಿಪರೀತ ಬುದ್ಧಿ
ಆಸೆಯೇ ದು:ಖಕ್ಕೆ ಮೂಲ
ಅತಿಯಾದರೆ ಅಮೃತವೂ ವಿಷ
ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು
ಅತಿ ಸ್ನೇಹ ಗತಿ ಕೆಡಿಸಿತು
ಹೊಳೆಯಲ್ಲಿ ಹುಣಿಸೇ ಹಣ್ಣು ಕಿವಿಚಿದಂತೆ
ನೀರಿನಲ್ಲಿ ಹೋಮ ಮಾಡಿದಂತೆ
ಅಟ್ಟದ ಮೇಲಿಂದ ಬಿದ್ದವನಿಗೆ ದಡಿಗೆ ತಗೊಂಡು ಹೇರಿದರಂತೆ
ತೋಳ ಬಿದ್ದರೆ ಆಳಿಗೊಂದು ಕಲ್ಲು
ಮೆತ್ತಗಿದ್ದಲ್ಲಿ ಮತ್ತೊಂದು ಗುದ್ದಲಿ
ನಿಸ್ಸಹಾಯಕರ ಮೇಲೆ ಹುಲ್ಲುಕಡ್ಡಿ ಸಹ ಭುಸುಗುಡುತ್ತದೆ
ಮೆತ್ತಗಿದ್ದವರನ್ನು ಮೊಣಕೈಯಲ್ಲಿ ಗುದ್ದಿದರು
ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರಂತೆ
ಅಂಗೈ ತೋರಿಸಿ ಅವಲಕ್ಷಣ ಅಂತ ಅನ್ನಿಸಿಕೊಂಡರಂತೆ
ಇರಲಾರದೆ ಇರುವೆ ಬಿಟ್ಟುಕೊಂಡು ಕಿರುಗೂರಿಗೆ ಹೋದರಂತೆ ಕಣಿ ಕೇಳುವುದಕ್ಕೆ
ದಾರಿಯಲ್ಲಿ ಹೋಗುತ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊಂಡಂತೆ
ಬೀದೀಲಿ ಹೋಗೋ ಮಾರೀನ ಮನೆ ಹೊಕ್ಕು ಹೋಗು ಅಂದಂತಾಯ್ತು
ಕೊಚ್ಚೆ ಮೇಲೆ ಕಲ್ಲು ಹಾಕಿದಂತೆ
ಸಲಿಗೆ ಕೊಟ್ಟ ಸೊಣಗ ಸಟ್ಟುಗ ನೆಕ್ಕಿತಂತೆ
ಇತ್ತತ್ತ ಬಾ ಅಂದ್ರೆ ಇದ್ದ ಮನೆ ಕಿತ್ಕೊಂಡರು
ಅಯ್ಯೋ ಪಾಪ ಅಂದ್ರೆ ಅರ್ಧ ಆಯುಸ್ಸು
ಬಡವನ ಸಿಟ್ಟು ದವಡೆಗೆ ಮೂಲ
ಬಡವನ ಕೋಪ ದವಡೆಗೆ ಮೂಲ
ಬಡವ ನೀ ಮಡಗಿದ ಹಾಗಿರು
ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ
ಬಾಣಲೆಯಿಂದ ಬೆಂಕಿಗೆ
ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
ಬೇಲಿಯೇ ಎದ್ದು ಹೊಲ ಮೇಯ್ದಂತೆ
ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ
ನನ್ನ ಮಗ ಎಂಟು ವರ್ಷಕ್ಕೆ ದಂಟು ಎಂದ
ಬೆಳೆಯುವ ಪೈರು ಮೊಳಕೆಯಲ್ಲಿ
ಮೂರು ವರ್ಷಕ್ಕೆ ಬಂದಿದ್ದು ಮೂವತ್ತು ವರ್ಷಕ್ಕೆ ಬಂತು
ಯಥಾ ರಾಜಾ ತಥಾ ಪ್ರಜಾ
ನೂಲಿನಂತೆ ಸೀರೆ; ತಾಯಿಯಂತೆ ಮಗಳು
ಸಂಕಟ ಬಂದಾಗ ವೆಂಕಟರಮಣ
ಕಾರ್ಯವಾಸಿ ಕತ್ತೆ ಕಾಲು ಕಟ್ಟು
ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ
ಆಕಾಶ ನೋಡೊದಕ್ಕೆ ನೂಕುನುಗ್ಗಲೆ ?
ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಬೆಳ್ಳಗಿರೋದೆಲ್ಲ ಹಾಲಲ್ಲ
ಅಲ್ಪರ ಸಂಗ ಅಭಿಮಾನ ಭಂಗ
ಸಗಣಿಯವನೊಡನೆ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು
ಸಗಣಿಯವನ ಸರಸಕ್ಕಿಂತ, ಗಂಧದವನ ಗುದ್ದಾಟ ಮೇಲು
ಅಲ್ಪ ವಿದ್ಯಾ ಮಹಾಗರ್ವಿ
ಅಂಬಲಿ ಕುಡಿಯುವವನಿಗೆ, ಮೀಸೆ ಹಿಡಿಯುವವನೊಬ್ಬ
ಗಂಜಿ ಕುಡಿಯೋನಿಗೆ,ಮೀಸೆ ಹಿಡಿಯುವವನೊಬ್ಬ
ತುಂಬಿದ ಕೊಡ ತುಳುಕುವುದಿಲ್ಲ
ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ತದೆಯೆ ?
ನರಿ ಕೂಗು ಗಿರಿ ಮುಟ್ಟುತ್ತದೆಯೆ ?
ಕೈ ಕೆಸರಾದರೆ ಬಾಯಿ ಮೊಸರು
ದುಡಿಮೆಯೇ ದುಡ್ಡಿನ ತಾಯಿ
ಕಾಯಕವೇ ಕೈಲಾಸ
ಆಳಾಗಬಲ್ಲವನು ಅರಸಾಗಬಲ್ಲ
ಕಷ್ಟ ಪಟ್ಟರೆ ಫಲವುಂಟು
ದುಡಿಮೆಯೇ ದೇವರು
ಕುಂಬಾರನಿಗೆ ವರುಷ; ದೊಣ್ಣೆಗೆ ನಿಮಿಷ
ಗಿಣಿ ಸಾಕಿ ಗಿಡುಗದ ಕೈಗೆ ಕೊಟ್ಟರು
ಚಿತ್ತಾರದ ಅಂದವನ್ನು ಮಸಿ ನುಂಗಿತು
ಸಾವಿರ ಚಿತ್ತಾರ ಮಸಿ ನುಂಗಿತು
ಕದ ತಿನ್ನೋವನಿಗೆ ಹಪ್ಪಳ ಈಡಲ್ಲ
ರಾವಣಾಸುರನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ
ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ
ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು
ಮಾತು ಬೆಳ್ಳಿ; ಮೌನ ಬಂಗಾರ
ಮಾತು ಮನೆ ಕೆಡಿಸಿತು; ತೂತು ಒಲೆ ಕೆಡಿಸಿತು
ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ
ಒಂದು ಹೊತ್ತು ತಿನ್ನೋವ್ನು ಯೋಗಿ, ಎರಡು ಹೊತ್ತು ತಿನ್ನೋವ್ನು ಭೋಗಿ, ಮೂರು ಹೊತ್ತು ತಿನ್ನೋವ್ನು ರೋಗಿ, ನಾಕು ಹೊತ್ತು ತಿನ್ನೋವ್ನ ಎತ್ಕೊಂಡು ಹೋಗಿ
ಹೊತ್ತಿಗಿಲ್ಲದ ಗಾದೆ, ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ.
ಆದ ಕೆಲಸಕ್ಕೆ ಅತ್ತೆಗಳು ಬಂದಂತೆ
ಊಟಕ್ಕಿಲ್ಲದ ಉಪ್ಪಿನಕಾಯಿ ..ಕ್ಕೆ ಸಮಾನ
ಹಲ್ಲಿದ್ದಾಗ ಕಡ್ಲೆ ಇಲ್ಲ; ಕಡ್ಲೆ ಇದ್ದಾಗ ಹಲ್ಲಿಲ್ಲ
ಚೆಲ್ಲಿದ ಹಾಲಿಗೆ ಅತ್ತು ಪ್ರಯೋಜನವಿಲ್ಲ
ಬಂದ ದಾರಿಗೆ ಸುಂಕವಿಲ್ಲ
ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
ತೊಟ್ಟಿಲನ್ನು ತೂಗುವ ಕೈ ಜಗತ್ತನ್ನೇ ತೂಗಬಲ್ಲುದು
ಕಣ್ಣರಿಯದಿದ್ದರೂ ಕರುಳರಿಯುತ್ತದೆ
ಬೆರಳು ತೋರಿಸಿದರೆ ಹಸ್ತ ನುಂಗಿದರಂತೆ
ಉಸ್ ಎಂದರೆ ಉಸಳಿ ಬೇಡಿದ್ದನಂತೆ
ಮನೆ ತುಂಬ ಮುತ್ತಿದ್ದರೆ ...ಗೂ ಪೋಣಿಸಿಕೊಂಡರಂತೆ
ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ.
ಗಂಧ ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೂ ಬಳಿದುಕೊಂಡರಂತೆ
ಅತ್ತ ದರಿ; ಇತ್ತ ಪುಲಿ
ಬಿಸಿ ತುಪ್ಪ; ನುಂಗೋದಕ್ಕೂ ಆಗೊಲ್ಲ; ಉಗುಳೋದಕ್ಕೂ ಆಗೊಲ್ಲ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ
ಮನೇಗೆ ಬೆಂಕಿ ಬಿದ್ದಾಗ ಭಾವಿ ತೋಡಕ್ಕೆ ಶುರು ಮಾಡಿದರಂತೆ
ಸಂತೆ ಹೊತ್ತಿಗೆ ಮೂರು ಮೊಳ ನೇದ ಹಾಗೆ
ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಅಂದರಂತೆ
ಆತುರಗಾರನಿಗೆ ಬುದ್ಧಿ ಮಟ್ಟ
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು ಬೇರೆ
ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ; ಉಡೋಕಿಲ್ಲದಿದ್ದರೂ ಪಟ್ಟೆ ಸೀರೆ ಉಟ್ಟರು
ನದೀನೇ ನೋಡದೆ ಇರೋನು ಸಮುದ್ರ ವರ್ಣನೆ ಮಾಡಿದ ಹಾಗೆ
ಐದು ಕುರುಡರು ಆನೆಯನ್ನು ಬಣ್ಣಿಸಿದ ಹಾಗೆ
ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದನಂತೆ
ಸಣ್ಣವರ ನೆರಳು ಉದ್ದವಾದಾಗ ಸೂರ್ಯನಿಗೂ ಮುಳುಗುವ ಕಾಲ
ಮಂತ್ರಕ್ಕಿಂತ ಉಗುಳೇ ಜಾಸ್ತಿ
ಮೂಗಿಗಿಂತ ಮೂಗುತಿ ಭಾರ
ಇಬ್ಬರ ಜಗಳ ಮೂರನೆಯವನಿಗೆ ಲಾಭ
ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು.
ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು
ಏತಿ ಅಂದರೆ ಪ್ರೇತಿ ಅಂದಂತೆ
ಓದುವಾಗ ಓದು; ಆಡುವಾಗ ಆಡು
ಓದಿ ಬರೆಯೋ ಕಾಲದಲ್ಲಿ ಆಡಿ ಮಣ್ಣು ಹುಯ್ಕೊಂಡರು
ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ
ಕಂಕುಳಲ್ಲಿ ಮಗು ಇಟ್ಟುಕೊಂಡು ಊರೆಲ್ಲ ಹುಡುಕಿದರಂತೆ
ಊರಿಗೆ ಉಪಕಾರಿ, ಮನೆಗೆ ಮಾರಿ
ಮನೆಗೆ ಮಾರಿ, ಪರರಿಗೆ ಉಪಕಾರಿ
ತಮ್ಮನೇಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಬೇರೇ ಮನೇ ಸತ್ತ ನೊಣದ ಕಡೆಗೆ ಬೆಟ್ಟು ಮಾಡಿದರು
ತನ್ನ ಎಲೇಲಿ ಕತ್ತೆ ಸತ್ತು ಬಿದ್ದಿದ್ರೆ , ಪಕ್ಕದ ಎಲೇಲಿ ನೊಣ ಹೊಡೆಯಕ್ಕೆ ಹೋದ
ಕೋತಿಗೆ ಹೆಂಡ ಕುಡಿಸಿದಂತೆ
ಮಂಗನ ಕೈಗೆ ಮಾಣಿಕ್ಯ ಕೊಟ್ಟ ಹಾಗೆ
ಹೆಂಡ ಕುಡಿದ ಕಪಿಗೆ ಚೇಳು ಕಡಿದ ಹಾಗೆ
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು
ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು
ಕೆಲಸವಿಲ್ಲದ ಬಡಗಿ ಮಗುವಿನ ... ಕೆತ್ತಿದ
ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ
ಕೆಲಸವಿಲ್ಲದ ಆಚಾರಿ ಮಗನ ತಲೆ ಕೆತ್ತಿದನಂತೆ
ಆರಕ್ಕೆ ಹೆಚ್ಚಿಲ್ಲ; ಮೂರಕ್ಕೆ ಕಡಿಮೆಯಿಲ್ಲ
ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ
ಕಳ್ಳನ ಹೆಂಡತಿ ಎಂದಿದ್ದರೂ ...ಯೆ
ಕಳ್ಳನ ಹೆಂಡತಿ ಎಂದಿದ್ದರೂ ಮುಂ..
ಶರಣರ ಬದುಕನ್ನು ಅವರ ಮರಣದಲ್ಲಿ ನೋಡು
ಅಯ್ಯಾ ಎಂದರೆ ಸ್ವರ್ಗ; ಎಲವೋ ಎಂದರೆ ನರಕ
ಸಜ್ಜನರ ಸಂಗ ಹೆಜ್ಜೇನು ಸವಿದಂತೆ
ಈಸಿ ನೋಡು , ಇದ್ದು ಜೈಸಿ ನೋಡು
ಹೂವಿನ ಜೊತೆ ದಾರ ಮುಡಿಯೇರಿತು
ಹೂವಿನಿಂದ ನಾರಿಗೂ ಸ್ವರ್ಗ
ಗೆದ್ದೆತ್ತಿನ ಬಾಲ ಹಿಡಿದ ಹಾಗೆ
ಆರು ದೋಸೆ ಕೊಟ್ರೆ ಅತ್ತೆ ಕಡೆ, ಮೂರು ದೋಸೆ ಕೊಟ್ರೆ ಸೊಸೆ ಕಡೆ
ಆರು ದೋಸೆ ಕೊಟ್ರೆ ಅತ್ತೆ ಕಡೇ,ಮೂರು ದೋಸೆ ಕೊಟ್ರೆ ಮಾವನ ಕಡೆ
ನಾಯಿ ಬಾಲ ಡೊಂಕು
ನಾಯಿ ಬಾಲಕ್ಕೆ ದೆಬ್ಬೆ ಕಟ್ಟಿದ ಹಾಗೆ
ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಜಟ್ಟಿ ಜಾರಿದರೆ ಅದೂ ಒಂದು ಪಟ್ಟು
ಮುದಿ ... ಮಹಾ ಪತಿವ್ರತೆ (ವೃದ್ಧ ನಾರೀ ಪತಿವ್ರತಾ)
ಸೂಳೆ ಮುಪ್ಪಾಗಿ ಗೊರವಿತ್ತಿಯಾದಳು
ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ
ಬಾಯಲ್ಲಿ ಬೆಣ್ಣೆ;ಬಗಲಲ್ಲಿ ದೊಣ್ಣೆ.
ಕೂರೆಗೆ ಹೆದರಿ ಸಂತೆಯಲ್ಲಿ ಸೀರೆ ಬಿಚ್ಚಿದರಂತೆ
ಕೂರೆಗೆ ಹೆದರಿ ಸೀರೆ ಬಿಚ್ಚೆಸೆದರು
ಕಾಸು ಕೊಟ್ಟು ಬ್ರಹ್ಮೇತಿ ತಗೊಂಡರು
ದುಡ್ಡು ಕೊಟ್ಟು ದೆವ್ವ ಹಿಡಿಸಿಕೊಂಡ ಹಾಗೆ
ಹೆಂಗಸರ ಬುದ್ಧಿ ಮೊಣಕಾಲ ಕೆಳಗೆ
ಹೆಂಗಸರ ಬುದ್ಧಿ ಸೊಂಟದಿಂದ ಕೆಳಗೆ
ಹಾಡ್ತಾ ಹಾಡ್ತಾ ರಾಗ; ಉಗುಳ್ತಾ ಉಗುಳ್ತಾ ರೋಗ
ಹಾಡ್ತಾ ಹಾಡ್ತಾ ರಾಗ , ನರಳ್ತಾ ನರಳ್ತಾ ರೋಗ
ಹೊಸ ವೈದ್ಯನಿಗಿಂತ ಹಳೆ ರೋಗಿಯೇ ಮೇಲು
ಹೊಸ ಡಾಕ್ಟರ್‌ಗಿಂತ ಹಳೇ ಕಾಂಪೌಂಡರ್ ವಾಸಿ
ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ
ಕುರು ಮೇಲೆ ಬರೆ ಎಳೆದ ಹಾಗೆ
ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ
ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
ಇತರೆ
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು
ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು
ಉಪ್ಪು ತಿಂದ ಮನೆಗೆ ಎರಡು ಬಗೆಯ ಬಂದ
ಅಡಿಕೆ ಕದ್ದ ಮಾನ ಆನೆ ಕೊಟ್ರೂ ಬರೊಲ್ಲ
ಅಲ್ಲುಂಟೆ, ಇಲ್ಲುಂಟೆ, ಕಲ್ಲಲ್ಲುಂಟೆ, ಶಿವದಾನ.
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು.
(ಅವರು) ಚಾಪೆ ಕೆಳಗೆ ತೂರಿದರೆ (ನೀನು) ರಂಗೋಲಿ ಕೆಳಗೆ ತೂರು.
ವೇದ ಸುಳ್ಳಾದ್ರು ಗಾದೆ ಸುಳ್ಳಲ್ಲ.
ಬೆಂಕಿ ಇಲ್ಲದೆ ಹೊಗೆ ಏಳಲ್ಲ
ಹಿತ್ತಲ ಗಿಡ ಮದ್ದಲ್ಲ
ಇರುಳು ಕಂಡ ಭಾವೀಲಿ ಹಗಲು ಬಿದ್ದರು
ಒಲಿದರೆ ನಾರಿ ಮುನಿದರೆ ಮಾರಿ
ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ
ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು
ಮೋಟಾಳಿಗೊಂದು ಚೋಟಾಳು
ಮಳ್ಳೀ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ, ಮೂರು ಮತ್ತೊಂದು ಅಂದ್ಲಂತೆ
ಹಾಲಿನಲ್ಲಿ ಹುಳಿ ಹಿಂಡಿದಂತೆ
ಕೂತು ತಿನ್ನುವವನಿಗೆ ಕುಡಿಕೆ ಹಣ ಸಾಲದು
ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ
ಚಂಡಾಲ ದೇವರಿಗೆ ಚಪ್ಪಲಿ ಸೇವೆ
ಹೆಂಡ ಕುಡಿಯುವ ದೇವರಿಗೆ ಹೇ.. ತಿನ್ನುವ ಪೂಜಾರಿ
ಹನುಮಂತರಾಯ ಹಗ್ಗ ತಿನ್ನುವಾಗ ಪೂಜಾರಿ ಶಾವಿಗೆ ಬೇಡಿದನಂತೆ
ಬಡವರ ಮನೆ ಊಟ ಚೆನ್ನ, ದೊಡ್ಡವರ ಮನೆ ನೋಟ ಚೆನ್ನ
ಎತ್ತಿಗೆ ಜ್ವರ ಬಂದ್ರೆ, ಎಮ್ಮೆಗೆ ಬರೆ ಎಳೆದರಂತೆ
ಶಂಖದಿಂದ ಬಿದ್ದರೆ ತೀರ್ಥ
ಈಚಲ ಮರದ ಕೆಲಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ
ಬಾಯಿ ಬಿಟ್ಟರೆ ಬಣ್ಣಗೇಡು
ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು
ಅಜ್ಜಿಗೆ ಅರಿವೆ ಚಿಂತೆ ಮೊಮ್ಮಗಳಿಗೆ ಮಿಂ..ನ ಚಿಂತೆ
ಗಂಡ ಹೆಂಡಿರ ಜಗಳ ಉಂಡು ಮಲಗುವ ತನಕ
ಊರಿಗೆ ಬಂದವಳು ನೀರಿಗೆ ಬಾರದೇ ಇರುವಳೇ?
ಶಿವಪೂಜೇಲಿ ಕರಡಿ/ಕರಡಿಗೆ ಬಿಟ್ಟ ಹಾಗೆ
ಇದ್ದದ್ದು ಇದ್ದ ಹಾಗೆ ಹೇಳಿದ್ರೆ, ಎದ್ದು ಬಂದು ಎದೆಗೆ ಒದ್ದನಂತೆ
ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ
ಅಡುಗೆ ಮಾಡಿದವಳಿಗಿಂತ ಬಡಿಸಿದವಳೇ ಮೇಲು
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?
ಕುಡಿಯೋ ನೀರಿನಲ್ಲಿ ಬೆರಳಾಡಿಸೋ ಬುದ್ಧಿ (ಕುಡಿಯೋ ನೀರಿನಲ್ಲಿ ... ಅದ್ದುವ ಬುದ್ಧಿ)
ಮೀಸೆ ಬಂದಾಗ ದೇಶ ಕಾಣದು ಮೊ.. ಬಂದಾಗ ನೆಲ ಕಾಣದು
ಅನುಕೂಲ ಸಿಂಧು; ಅಭಾವ ವೈರಾಗ್ಯ
ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೊಲ್ಲ
ಎಲ್ಲಾರ ಮನೇ ದೋಸೇನೂ ತೂತು
ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ
ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಂಡಂತೆ
ಮಾಡಿದೋರ ಪಾಪ ಆಡಿದೋರ ಬಾಯಲ್ಲಿ
ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ
ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ
ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು ?
ಹೊಳೆ ನೀರಿಗೆ ದೊಣೆನಾಯ್ಕನ ಅಪ್ಪಣೆ ಏಕೆ ?
ರಂಗನ ಮುಂದೆ ಸಿಂಗನೆ ? ಸಿಂಗನ ಮುಂದೆ ಮಂಗನೆ ?
ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ
ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ
ತೋಳ ಹಳ್ಳಕ್ಕೆ ಬಿದ್ದರೆ ಆಳಿಗೊಂದು ಕಲ್ಲು
ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು
ಬೆಟ್ಟ ಅಗೆದು ಇಲಿ ಹಿಡಿದಂತೆ
ಇಲಿ ಬಂತು ಎಂದರೆ ಹುಲಿ ಬಂತು ಎಂದರು
ಇಡಿಯ ಮುಳುಗಿದವನಿಗೆ ಚಳಿಯೇನು?ಮಳೆಯೇನು?
ಬೆಕ್ಕಿಗೆ ಚೆಲ್ಲಾಟ: ಇಲಿಗೆ ಪ್ರಾಣಸಂಕಟ
ಕೋಣೆಯ ಕೂಸು ಕೊಳೆಯಿತು; ಓಣಿಯ ಕೂಸು ಬೆಳೆಯಿತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
ಸತ್ಯಕ್ಕೆ ಸಾವಿಲ್ಲ; ಸುಳ್ಳಿಗೆ ಸುಖವಿಲ್ಲ
ದೇವಸ್ಥಾನದಲ್ಲಿ ಊದಿನ ಕಡ್ಡಿ ಹಚ್ಚದಿದ್ದರೂ ಚಿಂತೆಯಿಲ್ಲ; ... ಬಿಡಬೇಡ
ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ ಬಂತು
ಸಂಸಾರ ಗುಟ್ಟು; ವ್ಯಾಧಿ ರಟ್ಟು
ಮದುವೇಲಿ ಗಂಡು, ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ
ಐದು ಬೆರಳೂ ಒಂದೇ ಸಮ ಇರೋಲ್ಲ
ಕೋಪದಲ್ಲಿ ಕೊಯ್ದ ಮೂಗು ಶಾಂತವಾದ ಮೇಲೆ ಬರುತ್ತದೆಯೆ ?
ಮುಖ ನೋಡಿ ಮಣೆ ಹಾಕು
ದೀಪದ ಕೆಳಗೆ ಯಾವತ್ತೂ ಕತ್ತಲೇ
ಕುರಿ ಕೊಬ್ಬಿದಷ್ಟೂ ಕುರುಬನಿಗೇ ಲಾಭ
ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎಂದುಕೊಂಡರು
ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ
ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ
ಸಾವಿರ ಕುದುರೆ ಸರದಾರ, ಮನೆ ಹೆಂಡತಿ ಕಾಸ್ತಾರ
ಆಪತ್ತಿಗಾದವನೇ ನೆಂಟ
ಶಂಖದಿಂದ ಬಂದರೇ ತೀರ್ಥ
ಹನಿಹನಿಗೂಡಿದರೆ ಹಳ್ಳ; ತೆನೆತೆನೆಗೂಡಿದರೆ ಬಳ್ಳ
ಎಲ್ಲಾ ಜಾಣ; ತುಸ ಕೋಣ
ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ
ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು
ನವಿಲನ್ನು ನೋಡಿ ಕೆಂಬೂತ ಪುಕ್ಕ ಕೆದರಿತಂತೆ
ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ
ಅಂಕೆಯಲ್ಲಿದ್ದ ಹೆಣ್ಣು, ಮಜ್ಜಿಗೆಯಲ್ಲಿದ್ದ ಬೆಣ್ಣೆ ಕೆಡೊಲ್ಲ
ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ
ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ
ಹೆದರುವವರ ಮೇಲೆ ಕಪ್ಪೆ ಎಸೆದಂತೆ
ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
ಅಕ್ಕ ಸತ್ತರೆ ಅಮಾವಾಸ್ಯೆ ನಿಲ್ಲುತ್ತದೆಯೆ ?
ಅಕ್ಕಸಾಲಿ ಅಕ್ಕನ ಚಿನ್ನಾನೂ ಬಿಡ
ಅರವತ್ತಕ್ಕೆ ಅರಳು ಮರಳು
ಜನ ಮರುಳೋ ಜಾತ್ರೆ ಮರುಳೋ
ಕುಂಟನಿಗೆ ಎಂಟು ಚೇಷ್ಟೆ, ಕುರುಡನಿಗೆ ನಾನಾಚೇಷ್ಟೆ
ಬೊಗಳುವ ನಾಯಿ ಕಚ್ಚುವುದಿಲ್ಲ
ಕೈಗೆಟುಕದ ದ್ರಾಕ್ಷಿ ಹುಳಿ
ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು
ದುಷ್ಟರಿಂದ ದೂರವಿರು
ಒಂದು ಕಣ್ಣಿಗೆ ಬೆಣ್ಣೆ; ಮತ್ತೊಂದು ಕಣ್ಣಿಗೆ ಸುಣ್ಣ
ಕಂಡೋರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ
ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
ಮುಸುಕಿನೊಳಗೆ ಗುದ್ದಿಸಿಕೊಂಡಂತೆ
ಕದ್ದು ತಿಂದ ಹಣ್ಣು, ಪಕ್ಕದ ಮನೆ ಊಟ ಎಂದೂ ಹೆಚ್ಚು ರುಚಿ
ಮಿಂಚಿಹೋದ ಕಾರ್ಯಕ್ಕೆ ಚಿಂತಿಸಿ ಫಲವೇನು ?
ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ
ರವಿ ಕಾಣದ್ದನ್ನು ಕವಿ ಕಂಡ
ಕೆಟ್ಟು ಪಟ್ಟಣ ಸೇರು
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
ಕಾಲಿನದು ಕಾಲಿಗೆ; ತಲೆಯದು ತಲೆಗೆ
ವಿದ್ಯೆ ಇಲ್ಲದವನು ಹದ್ದಿಗಿಂತಲೂ ಕಡೆ
ಕನ್ನಡಿ ಒಳಗಿನ ಗಂಟು ಕೈಗೆ ದಕ್ಕೀತೆ ?
ಅತ್ತೆಗೊಂದು ಕಾಲ; ಸೊಸೆಗೊಂದು ಕಾಲ
ಗಣೇಶನನ್ನು ಮಾಡಲು ಹೋಗಿ ಅವರ ಅಪ್ಪನನ್ನು ಮಾಡಿದಂತೆ
ಮಾಡಬಾರದ್ದು ಮಾಡಿದರೆ ಆಗಬಾರದ್ದೇ ಆಗುತ್ತೆ
ನರಿಗೆ ಹೇಳಿದರೆ ನರಿ ತನ್ನ ಬಾಲಕ್ಕೆ ಹೇಳಿತಂತೆ
ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ
ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?
ಕೊಟ್ಟಿದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಮದುವೆಯಾಗೋ ಗುಂಡ ಅಂದರೆ ನೀನೇ ನನ್ನ ಹೆಂಡತಿಯಾಗು ಅಂದ ಹಾಗೆ
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ತಾನೂ ತಿನ್ನ; ಪರರಿಗೂ ಕೊಡ
ಗಂಡಸಿಗೇಕೆ ಗೌರಿ ದು:ಖ ?
ನಗುವ ಹೆಂಗಸು, ಅಳುವ ಗಂಡಸು ಇಬ್ಬರನ್ನೂ ನಂಬಬಾರದು
ಗುಡ್ಡ ಕಡಿದು ಹಳ್ಳ ತುಂಬಿಸಿ ನೆಲ ಸಮ ಮಾಡಿದ ಹಾಗೆ
ಹನುಮಂತನೇ ಹಗ್ಗ ತಿನ್ನುವಾಗ ಪೂಜಾರಿಗೆ ಶ್ಯಾವಿಗೆ ಬೇಕಂತೆ
ರತ್ನ ತಗೊಂಡು ಹೋಗಿ ಗಾಜಿನ ತುಂಡಿಗೆ ಹೋಲಿಸಿದರು
ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು
ಉಂಡೂ ಹೋದ; ಕೊಂಡೂ ಹೋದ
ಎಲೆ ಎತ್ತೋ ಜಾಣ ಅಂದರೆ ಉಂಡೋರೆಷ್ಟು ಮಂದಿ ಅಂದನಂತೆ
ಕೋತಿ ತಾನು ಮೊಸರನ್ನ ತಿಂದು ಮೇಕೆ ಬಾಯಿಗೆ ಒರೆಸಿತಂತೆ
ಹಾಡಿದ್ದೇ ಹಾಡಿದ ಕಿಸಬಾಯಿ ದಾಸ
ಹಸಿ ಗೋಡೆ ಮೇಲೆ ಹರಳು ಎಸೆದಂತೆ
ಊರು ಹೋಗು ಅನ್ನುತ್ತೆ; ಕಾಡು ಬಾ ಅನ್ನುತ್ತೆ
ಕಾಮಾಲೆ ಕಣ್ಣಿನವನಿಗೆ ಲೋಕವೆಲ್ಲಾ ಹಳದಿಯಂತೆ
ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು
ಲಂಘನಮ್ ಪರಮೌಷಧಮ್
ಹಾಲು ಕುಡಿದ ಮಕ್ಕಳೇ ಬದುಕೊಲ್ಲ; ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತವೇ ?
ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ
ತಲೆ ಗಟ್ಟಿ ಇದೆ ಅಂತ ಕಲ್ಲಿಗೆ ಹಾಯಬಾರದು
ಹಳೇ ಗಂಡನ ಪಾದವೇ ಗತಿ
ಹಬ್ಬದ ದಿನವೂ ಹಳೇ ಗಂಡನೇ ?
ಕಳ್ಳನಿಗೊಂದು ಪಿಳ್ಳೆ ನೆವ
ಅಳೋ ... ಮೇಲೆ ಗಳು ಬಿತ್ತು
ಸನ್ಯಾಸಿ ಬೆಕ್ಕು ಸಾಕಿದ ಹಾಗೆ
ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ
ಪಕ್ಕದ ಮನೇಗೆ ಬಿದ್ದ ಬೆಂಕಿ ಬಿಸಿ ತನ್ನ ಮನೇಗೆ ಬೀಳೋವರೆಗೂ ತಾಕಲ್ಲ
ಹುಚ್ಚು ಮನಸಿಗೆ ಹತ್ತು ಹಲವು ಮುಖಗಳು
ಶೆಟ್ಟಿ ಶೃಂಗಾರ ಆಗೋದ್ರಲ್ಲಿ ಪಟ್ಣ ಕೆಡ್ತು
ಅತ್ತೂ ಕರೆದೂ ಔತಣ ಮಾಡಿಸಿಕೊಂಡಂತೆ
ಕರೆಯದವರ ಮನೆಗೆ ಕಳಸಗಿತ್ತಿಯಾಗು
ಹಂಚಿದವರಿಗೆ ಹಲ್ಲು ಬಾಯಿ
ಕುಣೀಲಾರದ ಸೂಳೆ ನೆಲ ಡೊಂಕು ಅಂದ್ಳಂತೆ
ಬಿಡಿಯಕ್ಕೆ ಬಸಿರಾದರೆ ಹಡೆಯೋದು ಕಷ್ಟ
ದಾಕ್ಷಿಣ್ಯಕ್ಕೆ ಬಸಿರಾಗೋದು
ಪ್ರಥಮ ಚುಂಬನೇ ದಂತ ಭಗ್ನಮ್
ಹೊಸದರಲ್ಲಿ ಅಗಸ ಗೋಣಿಯನ್ನು ಎತ್ತಿ ಎತ್ತಿ ಒಗೆದನಂತೆ
ಕೋತಿ ತಾನು ಕೆಡೋದಲ್ದೆ ವನ ಎಲ್ಲ ಕೆಡಿಸಿತಂತೆ
ಕೈಲಾಗದೋನು ಮೈ ಪರಚಿಕೊಂಡ
ಕಜ್ಜಿ ಹೋದರೂ ಕಡಿತ ಹೋಗಲಿಲ್ಲ
ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?
ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?
ದೊಡ್ಡವರು ಹೇಳಿದ ಹಾಗೆ ಮಾಡು; ಮಾಡಿದ ಹಾಗೆ ಮಾಡಬೇಡ
ಏತಿ ಅಂದರೆ ಪ್ರೇತಿ
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಇನ್ನು ನಿನ್ನ ಗಳಗಂಟೆಗೆ
ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು
ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ
ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ
ಮೊಲ ಎಬ್ಬಿಸಿ ...ಕ್ಕೆ ಕೂತರು
ಹುಟ್ತಾ ಹುಟ್ತಾ ಅಣ್ಣ ತಮ್ಮಂದಿರು; ಬೆಳೀತಾ ಬೆಳೀತಾ ದಾಯಾದಿಗಳು
ಮಗೂನ ಚಿವುಟೋದು, ತೊಟ್ಟಿಲು ತೂಗೋದು
ತಾನು ಮಾಡುವುದು ಉತ್ತಮ; ಮಗ ಮಾಡುವುದು ಮಧ್ಯಮ; ಆಳು ಮಾಡುವುದು ಹಾಳು
ವೈದ್ಯರ ಹತ್ತಿರ, ವಕೀಲರ ಹತ್ತಿರ ಸುಳ್ಳು ಹೇಳಬೇಡ
ಆನೆಗೆ ಚಡ್ಡಿ ಹೊಲಿಸಿದ ಹಾಗೆ
ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ
ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು
ಕೋತಿ ಕಜ್ಜಾಯ ಹಂಚಿದ ಹಾಗೆ.
ಕಬ್ಬಿಣ ಕಾದಿರುವಾಗಲೇ ಬಡಿಯಬೇಕು
ಅರ್ಧ ಆದ ಕೆಲಸವನ್ನು ಅರಸನಿಗೂ ತೋರಿಸಬೇಡ
ಅತ್ತೆ ಒಡೆದ ಪಾತ್ರೆಗೆ ಬೆಲೆಯಿಲ್ಲ
ಬೇಲಿಯೇ ಎದ್ದು ಹೊಲ ಮೇದಂತೆ
ಪಾಪಿ ಧನ ಪ್ರಾಯಶ್ಚಿತ್ತಕ್ಕೆ
ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ
ಪಾಲಿಗೆ ಬಂದದ್ದು ಪಂಚಾಮೃತ
ಕಂಡ ಕಳ್ಳ ಜೀವ ಸಹಿತ ಬಿಡ
ಕಂಡ ಮನೆಗೆ ಕಳ್ಳ ಬಂದ , ಉಂಡ ಮನೆಗೆ ನೆಂಟ ಬಂದ
ನೀರಿಳಿಯದ ಗಂಟಲೊಳ್ ಕಡುಬಂ ತುರುಕಿದಂತಾಯ್ತು (ಮುದ್ದಣ)
ಮಕ್ಕಳಿಲ್ಲದ ಮನೆಯಲ್ಲಿ ಅಜ್ಜ ಅಂಬೆಗಾಲಿಟ್ಟ
ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ.
ಮಕ್ಕಳಿಸ್ಕೂಲ್ ಮನೇಲಲ್ವೇ? (ಕೈಲಾಸಂ)
'ಕೋ' ಅನ್ನೋದು ಕುಲದಲ್ಲಿಲ್ಲ ,'ತಾ' ಅನ್ನೋದು ತಾತರಾಯನ ಕಾಲದ್ದು
ದೇವನೊಬ್ಬ ನಾಮ ಹಲವು
ಸದಾಶಿವನಿಗೆ ಅದೇ ಧ್ಯಾನ
ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ 'ಭುಸ್' ಅಂತಂತೆ
ಬೆಂದ ಮನೆಗೆ ಹಿರಿದದ್ದೇ ಲಾಭ
ಸಂದೀಲಿ ಸಮಾರಾಧನೆ
ಎದ್ದರೆ ಆಳಲ್ಲ
ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
ಪಾಂಡವರು ಪಗಡೆಯಾಡಿ ಕೆಟ್ಟರು ; ಹೆಣ್ಣುಮಕ್ಕಳು ಕವಡೆಯಾಡಿ ಕೆಟ್ಟರು
ಮಾಡೋದು ಅನಾಚಾರ ; ಮನೆ ಮುಂದೆ ಬೃಂದಾವನ
ಉರಿಯೋ ಬೆಂಕಿಗೆ ತುಪ್ಪ ಸುರಿದ ಹಾಗೆ
ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?
ಮೊದಲಿದ್ದವಳೇ ವಾಸಿ ಎಬ್ಬಿಸಿದರೆ ಉಣ್ಣೋಳು
ಗುಂಪಿನಲ್ಲಿ ಗೋವಿಂದ
ನಾಯೀನ ತಗೊಂಡು ಹೋಗಿ ಸಿಂಹಾಸನದ ಮೇಲೆ ಕೂರಿಸಿದರೆ ... ಕಂಡು ಇಳಿಬಿತ್ತು
ಚೇಳಿಗೊಂದೇ ಬಸಿರು ; ಬಾಳೆಗೊಂದೇ ಗೊನೆ
ಹೀನ ಸುಳಿ ಬೋಳಿಸಿದರೂ ಹೋಗೋದಿಲ್ಲ
ಮಾಡಿದರೆ ಮನೆ ; ಹೂಡಿದರೆ ಒಲೆ
ಕಣ್ಣು ಕಟ್ಟಿ ಕಾಡಲ್ಲಿ ಬಿಟ್ಟ ಹಾಗೆ
ಉಂಡದ್ದೇ ಉಗಾದಿ ; ಮಿಂದದ್ದೇ ದೀವಳಿಗೆ
ಕಡ್ಡೀನ ಗುಡ್ಡ ಮಾಡು.
ಅತ್ತು ಹೆದರಿಸೋನೊಬ್ಬ ;ಹೇ.. ಹೆದರಿಸೋನೊಬ್ಬ
ಬರ್ತಾ ಬರ್ತಾ ರಾಯರ ಕುದುರೆ ಕತ್ತೆಯಾಯ್ತು
ತಾನು ಕಳ್ಳ ,ಪರರ ನಂಬ
ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?
ಗಡ್ಡಕ್ಕೆ ಬೇರೆ ಸೀಗೇಕಾಯಿ
ನೆಂಟರಿಗೆ ದೂರ ; ನೀರಿಗೆ ಹತ್ತಿರ
ಕುಲ ಸೋಸಿ ಹೆಣ್ಣು ತಗೊಂಡು ಬಾ ; ಜಲ ಸೋಸಿ ನೀರು ತಗೊಂಡು ಬಾ
ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
ಹದರಿದವರ ಮೇಲೆ ಕಪ್ಪೆ ಎಸೆದರು
ಅಳಿಯ ಮನೆ ತೊಳಿಯ
ನಾಯಿ ಮೊಲೇಲಿ ಖಂಡುಗ ಹಾಲಿದ್ದರೇನು, ದೇವರಿಗಿಲ್ಲ ದಿಂಡರಿಗಿಲ್ಲ
ಮಾಘ ಕಾವ್ಯ ಮಗನಿಗೆ ಬೇಡ
ಮುಂದೆ ಬರೋ ಕೋಡಿಗಿಂತ ಹಿಂದೆ ಬರೋ ಬಾಲಾನೇ ವಾಸಿ
ಪಾಯಸ ಮಾಡಿ ನಾಯಿ ಬಾಲದಲ್ಲಿ ತೊಳಸಿದ ಹಾಗೆ
ಆತುರಕ್ಕೆ ಅಜ್ಜಿ ಮೈನೆರೆದಳು
ಮಾಡಬಾರದ್ದು ಮಾಡಿದರೆ, ಆಗಬಾರದ್ದು ಆಗತ್ತೆ
ಹುಡುಕುತ್ತಿದ್ದ ಬಳ್ಳಿ ಕಾಲಿಗೇ ತೊಡರಿಕೊಂಡಿತು
ದನ ತಿನ್ನುವವನಿಗೆ ಗೊಬ್ಬರದ ಆಣೆ
ಪಾಪಿ ಚಿರಾಯು
ಕಣ್ಣು ಕುರುಡಾದರೆ ಬಾಯಿ ಕುರುಡೇ
ಅಳಿಯನ ಕುರುಡು ಬೆಳಗಾದರೆ ಗೊತ್ತಾಗತ್ತೆ
ಎಲ್ಲರ ಮನೆ ದೋಸೇನೂ ತೂತೇ.
ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?
ಹಣ ಅಂದರೆ ಹೆಣಾನೂ ಬಾಯಿ ಬಿಡುತ್ತದೆ
ಜರಡಿ ಸೂಜಿಗೆ ಹೇಳಿತಂತೆ: ನಿನ್ನ ಬಾಲದಲ್ಲಿ ತೂತು
ಅಹಂಕಾರಕ್ಕೆ ಉದಾಸೀನವೇ ಮಟ್ಟು.
ಎಲ್ಲಾ ಜಾಣ,ತುಸಾ ಕೋಣ.
ಸಂತೆಗೂ ಮುಂಚೆ ಗಂಟು ಕಳ್ಳರು ನೆರೆದರಂತೆ
ಹುಚ್ಚು ಬಿಟ್ಟ ಹೊರತು ಮದುವೆ ಆಗೋಲ್ಲ; ಮದುವೆ ಆದ ಹೊರತು ಹುಚ್ಚು ಬಿಡಲ್ಲ
ಬೈದು ಹೇಳಿದವರು ಬದುಕಕ್ಕೆ ಹೇಳಿದರು
ನಗೋ ಗಂಡಸನ್ನೂ ಅಳೋ ಹೆಂಗಸನ್ನೂ ನಂಬಬೇಡ
ವ್ರತ ಕೆಟ್ಟರೂ ಸುಖ ಪಡಬೇಕು
ಕೊಂದ ಪಾಪ ತಿಂದು ಪರಿಹಾರ
ಅಗ್ಗದ ಆಸೆಗೆ ಗೊಬ್ಬರ ತಗೊಂಡರು
ಅತ್ತೂ ಕರೆದೂ ಔತಣ ಹೇಳಿಸಿಕೊಂಡರು
ನೆಚ್ಚಿನೆಮ್ಮೆ ಕೋಣನನ್ನೀಯಿತು
ಬಸವನ ಹಿಂದೆ ಬಾಲ,ಸೂಜಿ ಹಿಂದೆ ದಾರ
ಕುದುರೆ ಕಂಡರೆ ಕಾಲುನೋವು
ಖಂಡಿತ ವಾದಿ,ಲೋಕ ವಿರೋಧಿ
ಅತ್ತೆ ಆಸ್ತೀನ ಅಳಿಯ ದಾನ ಮಾಡಿದ
ರಾಮ ರಾಜ್ಯ ಬಂದರೂ ರಾಗಿ ಬೀಸೋದು ತಪ್ಪಲಿಲ್ಲ
ಆಡು ಮುಟ್ಟದ ಸೊಪ್ಪಿಲ್ಲ
ಊರ ದನ ಕಾದು ದೊಡ್ಡ ಬೋರೇಗೌಡ ಅನ್ನಿಸಿಕೊಂಡ
ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ
ಗೌರಿ ಹಬ್ಬಕ್ಕೆ ಬಂದ ಗತಿಗೆಟ್ಟ ಅಳಿಯ
ಜೀನ ಗಳಿಸಿದ ;ಜಾಣ ತಿಂದ
ಶೆಟ್ಟಿ ಬಿಟ್ಟಲ್ಲೆ ಪಟ್ಣ
ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
ಹಾವು ಸಾಯಬಾರದು ;ಕೋಲು ಮುರಿಯಬಾರದು
ಕಾಸಿಗೊಂದು,ಕೊಸರಿಗೆರಡು
ಉ.. ಕುಡಿದರೂ ತನ್ನಿಚ್ಚೇಲಿರಬೇಕು
ಸ್ವತಂತ್ರವೋ,ಸ್ವರ್ಗಲೋಕವೋ
ಊಟ ತನ್ನಿಚ್ಚೆ,ನೋಟ ಪರರಿಚ್ಚೆ
ತಾಳಿದವನು ಬಾಳಿಯಾನು
ಲಾಲಿಸಿದರೆ ಮಕ್ಕಳು ; ಪೂಜಿಸಿದರೆ ದೇವರು
ಹುಚ್ಚಲ್ಲ,ಬೆಪ್ಪಲ್ಲ,ಶಿವಲೀಲೆ
ಅಳಿಯ ಅಲ್ಲ,ಮಗಳ ಗಂಡ
ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ
ತಲೆಗೆಲ್ಲಾ ಒಂದೇ ಮಂತ್ರವಲ್ಲ
ಬಾಲ ಸುಟ್ಟ ಬೆಕ್ಕಿನ ಹಾಗೆ
ಹಿತ್ತಿಲ ಗಿಡ ಮದ್ದಲ್ಲ
ಸರಿಸರಿಯಾಗಿದ್ರೆ,ಪರಿಪರಿ ನೆಂಟರು
ಇಷ್ಟನ್ನು ಕಂಡೆಯಾ ಕೃಷ್ಣಂಭಟ್ಟಾ ಅಂದರೆ,ಮುಪ್ಪಿನ ಕಾಲಕ್ಕೆ ಮೂರು ಜನ ಹೆಂಡಿರು
ಹಾಕು ಮಣೆ,ನೂಕು ಮಣೆ,ತಳ್ಳು ಮಣೆ
(ನೀನು)ಮೊಳ ಬಿಟ್ಟರೆ,(ನಾನು) ಮಾರು ಬಿಡುತ್ತೇನೆ
ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರು.
ಕರೆದು ಹೆಣ್ಣು ಕೊಟ್ಟರೆ ಮಲ್ಲೋಗರ ಬಂತಂತೆ.
ಚೇಳಿಗೆ ಪಾರುಪತ್ಯ ಕೊಟ್ಟರೆ ಮನೆಯವರಿಗೆಲ್ಲಾ ಮುಟ್ಟಿಸಿತಂತೆ.
ದಿನಾ ಸಾಯೋರಿಗೆ ಅಳೋರ್ ‍ಯಾರು?
ಊರು ಅಂದ ಮೇಲೆ ಹೊಲಗೇರಿ ಇಲ್ಲದೆ ಇರುತ್ತದೆಯೇ?
ಮೇಯುವುದಕ್ಕೆ ಮುಂದೆ ;ಮೀಯುವುದಕ್ಕೆ ಹಿಂದೆ
ಕಡ್ಡೀನ ಗುಡ್ಡ ಮಾಡು
ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು
ಆಟಕ್ಕುಂಟು,ಲೆಕ್ಕಕ್ಕಿಲ್ಲ
ಹಿರೀಮಗ ಆಗಬೇಡ,ಹಿತ್ತಿಲ ಕದ ಆಗಬೇಡ
ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ
ಆಡಿಕೊಳ್ಳೋರ ಮುಂದೆ ಎಡವಿ ಬಿದ್ದ ಹಾಗೆ
ಹಣವಿದ್ದ ಗಂಡನನ್ನು ಮದುವೆಯಾದರೂ ಋಣವಿದ್ದಷ್ಟೇ
ಬಗ್ಗಿದವನಿಗೆ ಒಂದು ಗುದ್ದು ಜಾಸ್ತಿ
ಹಾಲಿನ ದುಡ್ಡು ಹಾಲಿಗೆ;ನೀರಿನ ದುಡ್ಡು ನೀರಿಗೆ
ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್‌ತಂತೆ
ಗಂಡ ಸರಿಯಿದ್ರೆ ಗುಂಡೂ ಪಾವನ
ಬೆಳ್ಳಗಿರೋದೆಲ್ಲಾ ಹಾಲಲ್ಲ
ಹೊಳೆಯುವುದೆಲ್ಲಾ ಚಿನ್ನವಲ್ಲ
ಹಾಸಿಗೆ ಇದ್ದಷ್ಟು ಕಾಲು ಚಾಚು
ಉಣ್ಣು ಬಾ ಅಂದ್ರೆ,ಇರಿ ಬಾ ಅಂದ್ರಂತೆ
ಇರುವೆಗೆ ಇರುವೆ ಮೈ ಭಾರ,ಆನೆಗೆ ಆನೆ ಮೈ ಭಾರ
ಮನಸ್ಸಿದ್ದರೆ ಮಾರ್ಗ
ತಲೆಗೆ ಬಿದ್ದ ನೀರು ಕಾಲಿಗೆ ಬೀಳದೆ ಇರುತ್ತದೆಯೇ?
ಅದ್ನೇ ಉಂಡೇನ್ ಅತ್ತೆಮ್ನೋರೇ,ಕದ ತೆಗೀರಿ ಮಾವ್ನೋರೇ ಅಂದ್ರಂತೆ
ಬಡವೆ ಸೀರೆ ಉಡದೆ ಮಾಸಿತು
ಆಕಾಶಕ್ಕೆ ಏಣಿ ಹಾಕಿದ ಹಾಗೆ
ಸೇರಿಗೆ ಸವ್ವಾಸೇರು
ಒಂದಕ್ಕೆರಡು ದಂಡ,ಹೆಂಡಕ್ಕೆ ರಾಗಿ ದಂಡ
ಹುಟ್ಟು ಗುಣ ಸುಟ್ಟರೂ ಹೋಗಲ್ಲ
ದೇವರಿಲ್ಲದ ಗುಡಿ;ಯಜಮಾನನಿಲ್ಲದ ಮನೆ ಎರಡೂ ಒಂದೇ
ಕೊಟ್ಟ ಹೆಣ್ಣು ಕುಲದಿಂದ ಹೊರಗೆ
ಹೆಣ್ಣು ಚಂದ,ಕಣ್ಣು ಕುರುಡು
ನಾಯಿ ಹೆಸರು'ಸಂಪಿಗೆ'ಅಂತ
ನಾಯಿಗೆ ವಯಸ್ಸಾದ್ರೆ ಅಜ್ಜ ಅಂತಾರಾ?
ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ,ಆತ ಆಕೇನ ಬಿಟ್ಟು ಆರು ವರ್ಷ ಆಗಿತ್ತಂತೆ.
ಉತ್ತರನ ಪೌರುಷ ಒಲೆ ಮುಂದೆ;ನಿನ್ನ ಪೌರುಷ ನನ್ನ ಮುಂದೆ
ಕೊಟ್ಟೋನು ಕೋಡಂಗಿ;ಇಸಕೊಂಡೋನು ಈರಭದ್ರ
ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
ಗಂಟೂ ಹೋಯ್ತು;ನಂಟೂ ಹೋಯ್ತು
ಅಪ್ಪನ್ನೇ ಅಪ್ಪ ಅನ್ನದೋನು,ಚಿಕ್ಕಪ್ಪನ್ನ ಅಪ್ಪಾ ಅಂತ ಕರೀತಾನಾ?
ಊರಿಗೊಂದು ದಾರಿಯಾದ್ರೆ,ಎಡವಟ್ಟಂಗೆ ಅವನದ್ದೇ ದಾರಿ
ಹೊಟ್ಟೆ ತುಂಬಿದ ಮೇಲೆ ಹಿಟ್ಟೂ ಕಲ್ಲು
ಒನಕೆ ಮುಂಡು ಚಿಗುರಿದಂತೆ
ಹುಣಿಸೆ ಮರ ಮುದಿಯಾದ್ರೂ ಕಾಯಿ ಹುಳಿ ಹೋಗಲ್ಲ
ಮೂರೂ ಬಿಟ್ಟೋನು,ಊರಿಗೆ ದೊಡ್ಡೋನು
ಭಾವಿಗೆ ಬಿದ್ರೆ,ಸಾಲಿಗ್ರಾಮ ಸಿಗ್‌ತಂತೆ
ನಾಯಿಗೆ ಹೊತ್ತಿಲ್ಲ;ನಿಲ್ಲಕ್ಕೆ ನೆಲೆಯಿಲ್ಲ
ಯಂಕ,ಸೀನ,ನೊಣ ಅಂತ ಮನೇಲಿ ಮೂರೇ ಜನ
ಕಂಡೋರ ಮನೆ ರೊಟ್ಟಿಗೆ ಗಿಣ್ಣು ಹಾಲು ಕಾಯಿಸಿದರಂತೆ
ಬೆಣ್ಣೇಲಿ ಕೂದಲು ತೆಗೆದ ಹಾಗೆ
ತುಂಬೆ ಗಿಡಕ್ಕೆ ಏಣಿ ಹಾಕಿದಂತೆ
ಸಾವಿರ ಉಳಿ ಪೆಟ್ಟು,ಒಂದು ಚಿತ್ತಾರ
ಕಾಣದಿರೋ ದೇವರಿಗಿಂತ ಕಾಣೋ ಭೂತಾನೇ ವಾಸಿ
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
ಹಿಟ್ಟು ಹಳಸಿತ್ತು;ನಾಯಿ ಹಸಿದಿತ್ತು
ಬಡ್ಡಿ ಬಾಯಿಗಂಜ್ತೀಯೋ,ದೊಡ್ಡೆತ್ತಿನ ಕೋಡಿಗಂಜ್ತೀಯೋ
ತಾಯೀನೇ ತಿಂದೋಳು,ಅತ್ತೇನ ಬಿಟ್ಟಾಳೆಯೇ?
ಒಂದು ಬಿಟ್ಟು ಇನ್ನೊಂದು ಕಟ್ಕೊಂಡ್ರಂತೆ
ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ
ಶಿಸ್ತುಗಾರ ಪುಟ್ಟಶಾಮಿ
ಎದೆ ಸೀಳಿದ್ರೆ ಮೂರಕ್ಷರಾನೂ ಇಲ್ಲ
ತಾಳಕ್ಕೆ ತಕ್ಕ ಮೇಳ
ಕಂಡೋರ ಆಸ್ತಿಗೆ ನೀನೇ ಧಣಿ
ಸೂಳೆ ಕೈಲಿ ಜೋಳ ಕುಟ್ಟಿಸಿದ ಹಾಗೆ
ಕೋಮಟಿ ಕೊಡ;ಜೈನಿಗ ಬಿಡ
ನಿನ್ನ ಹಿತು(ಮುದ್ದು),ನನ್ನ ತಿಂತು
ಎರಡೂ ಕೈ ಸೇರಿದರೆ ಚಪ್ಪಾಳೆ
ಬೆಟ್ಟ ಮಹಮ್ಮದನ ಬಳಿ ಬರಲ್ಲ,ಮಹಮ್ಮದನೇ ಬೆಟ್ಟದ ಬಳಿ ಹೋಗಬೇಕು
ಹುಲಿಗೆ ಹುಣ್ಣು ಎದ್ದ ಹಾಗೆ
ಹಂಚು ಕಾಣದ ಕೈ ಕಂಚು ಕಾಣ್ತು
ಬರೀ ಕೈಗಿಂತ ವಾಸಿ ಹಿತ್ತಾಳೆ ಕಡಗ
ಮನೇಲಿ ಇಲಿ,ಬೀದೀಲಿ ಹುಲಿ
ಸೂಳೆಗೆ ಮದುವೆ ಮಾಡಿದ ಹಾಗೆ
ಗುರುವಿಗೇ ತಿರುಮಂತ್ರ
ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ
ಎದ್ದೋಗೋ ಮಾತು ಬಿದ್ದೋಗಲಿ
ಆಡೋಕಾಗಲ್ಲ,ಅನುಭವಿಸಕ್ಕಾಗಲ್ಲ
ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
ಹಾಲಿದ್ದಾಗ ಹಬ್ಬ ;ನೀರಿದ್ದಾಗ ನೇಮ
ತಾಯಿ ಮಾಡಿದ ಹೊಟ್ಟೆ ;ಊರು ಮಾಡಿದ ಕೊಳಗ
ಅಳಿಲ ಸೇವೆ, ಮಳಲ ಭಕ್ತಿ
ಕೆಟ್ಟ ಅಡಿಗೆ ಅಟ್ಟವಳೇ ಜಾಣೆ
ಕಿಡಿ ಇಲ್ಲದೆ ಬೆಂಕಿಯಿಲ್ಲ ;ಕಾರಣ ಇಲ್ಲದೆ ಜಗಳವಿಲ್ಲ
ಗಂಡಸು ಕೂತು ಕೆಟ್ಟ ;ಹೆಂಗಸು ತಿರುಗಿ ಕೆಟ್ಟಳು
ಹತ್ತಿರಕ್ಕೆ ಬಂದರೆ ಹಡಿಕ್ ನಾತ
ಹೂ-ದವರು ‌ಯಾರು ಅಂದರೆ ಮಾಸಿದ ಸೀರೆಯವರು.
ಅಟ್ಟದಿಂದ ಬಿದ್ದವನನ್ನು ದಡಿಗೆ ತೆಗೆದುಕೊಂಡು ಚಚ್ಚಿದರು.
ಬಿಟ್ಟಿ ಬಂದದ್ದಾದರೆ ನನಗೂ ಇರಲಿ,ನಮ್ಮ ತಾತಂಗೂ ಇರಲಿ.
ಸಾಯ್ತೀನಿ ಸಾಯ್ತೀನಿ ಅಂದೋಳು ಸಾವಿರ ಮುದ್ದೆ ನುಂಗಿದಳಂತೆ.
ಸಂತೆ ಸೂಳೆ ನೆಚ್ಚಿಕೊಂಡು ಮನೆ ಹೆಂಡಿರನ್ನ ಬಿಟ್ಟರಂತೆ.
ಮನೆ ದೇವರನ್ನ ಮೂಲೆಗಿಟ್ಟು ಬೆಟ್ಟದ ದೇವರಿಗೆ ಬುತ್ತಿ ಹೊತ್ತಂತೆ.
ಅಡಿ ಅನ್ನಕ್ಕೆ ಅವಳೇ ಇಲ್ಲೆ ; ಪಿಳ್ಳೆ ಪೇರು ರಾಮಕೃಷ್ನ !( ಇದು ತಮಿಳು ಭಾಷೆಯ ಗಾದೆಯಾದರೂ ಕನ್ನಡಿಗರಲ್ಲಿ ಹೆಚ್ಚು ಪ್ರಚಲಿತವಿದೆ)
ದೇಶ ಸುತ್ತು ; ಕೋಶ ಓದು.
ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?
ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ
ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು
ತುಂಬಿದ ಕೊಡ ತುಳುಕುವುದಿಲ್ಲ
ವೇದ ಸುಳ್ಳಾದರೂ ಗಾದೆ ಸುಳ್ಳಾಗದು
ಎಲ್ಲರ ಮನೆಯ ದೋಸೆಯೂ ತೂತೆ !
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
ನಾಳೆ ಯಾರೋ ನಾನು ಯಾರೋ!
ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
ಉತ್ತುಬಿತ್ತಿದ ಭತ್ತವಾದರೂ ಮಳೆಯಿಲ್ಲದೆ ಮೊಳೆಯದು
ಬಿದ್ದಿನ (=ಅತಿಥಿ, ನೆಂಟ) ಬಂದು ಹಾಳು ಮನೇ ಯಜಮಾನ (ಮನೆಯೊಡೆಯ) ಕುಂತು ಹಾಳು
ಅರಣೆ (= ಹಾವು ರಾಣಿ) ಕಡಿದರೆ ಭರಣಿ (=ಪಿಂಗಾಣಿ ಮಡಿಕೆ) ಮದ್ದು ಸಾಲದು
ಅಪ್ಪಂಥೋನಿಗೆ ಇಪ್ಪಂತ್ತೊಂದು ಕಾಯಿಲೆ
ಸಾಲ ಕೊಳ್ಳುವಾಗ ಒಂದುರಾಗ, ಸಾಲ ಹೊಳ್ಳಿ ಕೊಡುವಾಗ ನಾನಾರಾಗ
ಬಾಳಿಬದುಕಿದವ ಕಲಿ(=ವಿದ್ಯೆ)ಕಲಿತ, ಬಾಳಲಾರದವ ಪಾಠ ಕಲಿತ
ತಳಮಳ ತೀರಲಿಲ್ಲ, ಕಳವಳ ಕಳಿಯಲಿಲ್ಲ
ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?
ಕನಿಗೇಡಿಗೆ(ಸ್ವಾರ್ಥಿಗೆ) ಗತಿ ಇಲ್ಲ
ಅರವಲ್ಲದ್ದು (ಧರ್ಮವಲ್ಲದ್ದು) ಮಾಡಿದರೂ ತರವಲ್ಲದ್ದು ಮಾಡಬಾರದು
ಹಗೆ ಬಿತ್ತಿ ಬೆಂಕಿ(ಹೊಗೆ) ಬೆಳೆದ
ಬರೀ ಮಾತಾಡಿ ಬೈಯ್ಯಿಸಿಕೊಂಡ
ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ
ಹಸನಾದ ಮಾತಿಗೆ ಜೀವ ಬೆಸನಾಯ್ತು
ಬಿಟ್ಟವರ ಕಂಡು ಬಿಟ್ಟು ಬಾಳುಗೆಟ್ಟ
ಚಿತ್ತದ ಕಳವಳ ನಿಲ್ಲಿಸಿದವರೇ ಉತ್ತಮರು
ಸಿರಿ ಬಂದ ಕಾಲದಲಿ ಕರದಲಿ ಧರ್ಮ ಬೇಕು
ಎತ್ತ ಹೋದರೂ ಬಿಡದು ಒತ್ತಿ ಕಾಡುವ ವಿಧಿ
ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ
ಬುದ್ಧಿ ಉಳ್ಳವನಿಗೆ ಕರ್ಮ ತಿದ್ದಿ ಕೊಡುತಿತ್ತು
ಬೆನ್ನಹಿಂದೆ ಬಿದ್ದು (ಓಡಿ)ಬನ್ನ ಪಟ್ಟ
ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು
ಬಡವನಿಗೆ ಉಳಿದಷ್ಟೆ ಅಭಿಮಾನ
ಬಂದ ಅಥಿತಿಗೆ ಅನ್ನ ಇಕ್ಕದ ಬದುಕು ಯಾತಕ್ಕು ಬೇಡ
ಬಡವ ನೀ ಸೆಣಸಿ ಕೆಡಬೇಡ
ಸರಿಯಾದ ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ
ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ
ರಸಿಕನ ನುಡಿ ತಿಂಗಳ ಬೆಳಕಿನಂತೆ
ಎಂಜಲ ತಿಂದರೂ ಅಂಜದೆ ತಿನ್ನು
ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು
ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು
ಗಂಧದ ಮರವನ್ನು ಸುಟ್ಟು ಬೂದಿಯ ತಂದು ಪೂಸಿದ
ಮಾಡಿದ ಕರ್ಮ ಹಿಡಿದೊಯ್ಯದೆ ಬಿಡದು
ಜೀವ ಜೀವವ ತಿಂದು ಜೀವಿಸುತಿದೆ ಜಗವೆಲ್ಲ
ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು
ತನ್ನ ತಾ ಬಲ್ಲವನೆ ಬಲ್ಲವ
ನಕ್ಕು ನುಡಿದವರು ಕಡೆಗೆ ಅಡವಿಯಲಿಕ್ಕಿ ಬರುವರು
ಇಟ್ಟ ವಿಭೂತಿ ಪಟ್ಟದಂತೆ ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ
ಬಾಲೇರ ಮನಸ್ಸು ನೆಲೆಯಿಲ್ಲ
ಹಬ್ಬಕ್ಕೆ ಹೋಗಿ ತಬ್ಬಿಬ್ಬನಾದ
ಕೆರೆಗೆ ತೊರೆ ಕೂಡಿ ಸರೋವರ ವಾಯ್ತು
ಅರಿತು ಮಾಡಿದ ಪಾಪ ವಜ್ರದ ಸೆರೆಯಂತೆ
ತನ್ನ ತಾ ತನ್ನಿಂದಲೇ ಅರಿಯಬೇಕು
ಕಡಲಲ್ಲಿ ಪುಟಿದ ತೆರೆ ಕಡಲಲ್ಲೇ ಕರಗಿ ಹೋಯ್ತು
ಬಣ ಬಣ ಬೆಳಕು ಹರಿದಾಗ ಕತ್ತಲು ಎತ್ತಲೊ
ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು
ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು
ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು
ದೀನನ ಬೇಡಿ ಬಳಲಿದರೆ ಆತ ಏನು ಕೊಟ್ಟಾನು
ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ
ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ
ಹೇಮಗೇಡಿ ನೇಮ ಬೆಳಗಿದ
ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ
ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ
ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ
ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ
ಗುಣಗೇಡಿ ಒಡನಾಟ ಯಾವಾಲು ದುಃಖದೇಲ್ ಇದ್ದಂತೆ
ಮಾತಿಗೊಂದು ಮಾತು ಬಂತು ವಿಧಿ ಬಂದು ಆತುಕೊಣ್ತು
ಮೆಲ್ಲಗೆ ಹರಿಯೋ ನೀರು ಕಲ್ಲ ಕೊರೆದಿತ್ತು
ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ
ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ
ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು
ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ
ಬಸುರಲ್ಲಿ ಬಂದ ಕೂಸು ಮುದ್ದು
ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ ಸ್ವರ್ಗ ಬೇಕು ಅಂದ
ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು
ನಿದ್ದೆ ಗೈಯೋನ ಹೊತ್ತು ನುಂಗ್ತು
ಹಕ್ಕಿ ತೆನೆ ತಿಂದು ಹಿಕ್ಕೆ ಇಕ್ಕಿ ಹೋಯ್ತು
ಬಡವರ ಮಾತು ನುಡಿನುಡಿಗೂ ಬೇಸರ
ಅಂಬಲಿಗೆ ಗತಿಇಲ್ಲದವ ಕಟ್ಟಾಣಿ ರಂಬೆಯ ಬಯಸಿದ
ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ
ಭಂಗಿ ರಸ ನೆತ್ತಿಗೇರಿ ಬಿಂಗಿಯಂತಾದ
ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ
ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ
ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು
ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು
ಪರರ ಹಂಗಿಸಿ ಮಂಗ ಅನಿಸಿಕೊಂಡ
ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ
ಬೋನದ ಬುತ್ತಿ ತಪ್ಪಿ ಚಿತ್ತವಲ್ಲಭೆಯನ್ನು ಮರೆಸಿತ್ತು
ಕಲ್ಲಿನಲ್ಲಿ ಕಳೆಯ ನಿಲ್ಲಿಸಿದ ಗುರುವಿನ ಸೊಲ್ಲಿನಲ್ಲೇ ದೈವ
ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ
ಅರಿತೂ ಮಾಡಿದ ಪಾಪ ವಜ್ರದ ಸೆರೆಯಂತೆ
ತಾ ನೊಂದಂತೆ ಬೇರೇರ ನೋವನ್ನೂ ಅರಿಯಬೇಕು
ಹೊಲಬನರಿಯದ (ರೀತಿಯಲ್ಲದ) ಮಾತು ತಲೆ ಬೇನೆ
ಹೊಲಬನರಿತು ನುಡಿದ ಮಾತು ಫಲ ಪಕ್ವವಾದಂತೆ
ಪ್ರಸ್ತಕ್ಕಿಲ್ಲದ ಮಾತು ಹತ್ತುಸಾವಿರವಿದ್ದೇನು
ಸಾಲ ಕೊಳ್ಳುವಾಗ ಹಾಲು ಕುಡಿದಂತೆ, ಸಾಲ ತಿರುಗಿ ಕೊಡುವಾಗ ಕಿಬ್ಬದಿ ಕೀಲು ಮುರಿದಂತೆ
ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು
ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ
ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ
ಅಂಗಾಂಗದಲ್ಲಿ ಪಾಪ ಮಡಗಿಕೊಂಡು ಗಂಗೇಲಿ ಮಿಂದು ಬಂದ
ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು
ಅರುಗೆಟ್ಟ ನಿದ್ದೆ (=ಅರಿವಿಲ್ಲದೆ ಮಲಗಿರುವುದು) ಇರಗೆಟ್ಟು (=ಇರವು ಗೆಟ್ಟು) ಸತ್ತಂತೆ
ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು
ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ
ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ
ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ
ವಿದ್ಯೆ ಇಲ್ಲದವನ ಮೊರೆ ಹಾಳೂರ ಹದ್ದಿನಂತೆ
ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ
ವಿದ್ಯೆ ಬಲ್ಲವ ಎಲ್ಲಿದ್ದರು ಸಲ್ಲುವ
ಕುಚುಕು ಬುದ್ಧಿ ಹೊಕ್ಕವನು ಕೆಟ್ಟ
ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ
ಒಂದೊಂದು ಕಾಲಕ್ಕೆ ಒಂದೊಂದು ಪರಿ
ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ
ಸಿರಿತನ ಇರೂತನ ಹಿರಿತನ ಘನ
ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ
ಎಂಟು ಹೊನ್ನು ಘನವಾದ ನಂಟು ತಂತು
ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು
ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ
ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು
ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
ತೋಟದ ಬೇಲಿಯನ್ನು ದಾಟಿ ನೋಡದವರಾರು
ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ
ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ
ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ
ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು
ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ
ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ
ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ
ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು
ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು
ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು
ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು
ಲಕುಮಿ ತೊಲಗಿದ ಬಳಿಕ ಕುಲ ವೀರವಿದ್ದು ಫಲವಿಲ್ಲ
ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು
ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ
ಲಲನೆಯರ ಒಲುಮೆ ತೊಲಗಿದರೆ ಇಲ್ಲ
ಇಂಬರಿತು ಕೊಡುವಳೆ ರಂಭೆ
ಒಲುಮೆಗೆ ನೋಟಬೇಟವೇ ಮೊದಲು
ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಕಾದಡಿತು
ಸಿರಿಯವ್ವನದ ಹೆಣ್ಣು ಸಕ್ಕರೆ ಬೊಂಬೆಯಂತೆ
ಹಾದರ ಹಾಲು ಸಕ್ಕರೆಯಂತೆ,ಬಯಲಾದರೆ, ಬೇವಿನ ಸಾರದಂತೆ
ಚಿತ್ತವಿಲ್ಲದವಳ ಒಡಗೂಟ ನಾಯ್ ಹೆಣಾನ ಹತ್ತಿ ತಿನ್ನುವಂತೆ
ಕೋರಿ (=ಚೆಂದುಳ್ಳಿ ಚೆಲುವೆ) ಒಲುಮೆ ತನಗೆ ಅನ್ನೋ ಮಾರನಿಗೆ (=ಚೆಲುವಾಂತನಿಗೆ) ಮಾರಿ ಹಿಡಿಯಿತು.
ನಚ್ಚುವುದು ಬೇರೆ ಹೆಣ್ಣು ಒಬ್ಬನ ಮೆಚ್ಚುವುದು ಬೇರೆ
ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
ಏರಿ ಮ್ಯಾಗಿನ ಪಂಜು ನೀರೊಳಗೆ ಉರಿಯಿತು
ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ
ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ
ಹೊತ್ತನ್ನು ಕೊಲ್ಲುವ ಮೈಗಳ್ಳಗಿಂತ ಸತ್ತ ಹೆಣ ಲೇಸು
ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
ಮಾಡುವವ ಉತ್ತಮ ಆಡಿ ಮಾಡದವ ಅಧಮ
ನೀಡುವವ ಉತ್ತಮ ಬೇಡಿದರೂ ನೀಡದವ ಅಧಮ
ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು
ಇಚ್ಚೆಯ ಅರಿತು ಕೊಟ್ಟ ನುಚ್ಚೊಂದು ಮಾಣಿಕ್ಯ
ಬೇಡಿದರೆ ಇಲ್ಲ ಅನ್ನೋದ್ ಕಷ್ಟ ನೀಡುವರ ಬೇಡ ಅನ್ನೋದ್ ಕಷ್ಟ
ಕೈಯೆತ್ತಿ ಕೊಡಲಿಲ್ಲ ಮೈಯ್ಯ ದಂಡಿಸಲಿಲ್ಲ ಪುಣ್ಯದ ಪಾಲು ನನಗಿರಲಿ ಅಂದ
ಕೇಡು ಬರೋ ಕಾಲಕ್ಕೆ ಬುದ್ಧಿಗೇಡು
ಪ್ರಾರಬ್ಧ ಬಂದ ಕಾಲಕ್ಕೆ ಒಂದಲ್ಲ ಒಂದು ಕೇಡು
ಕೋಡಗ ಲಂಕೆಯ ಸುಡುವಾಗ ರಾವಣ ನಾಡ ಕಾಯ್ದಿದ್ದ
ನಾಡೆಂದ್ರ ಕಾಡನ್ನ ಸುಡುವಾಗ ದೇವೇಂದ್ರ ಗಾಳೀನ್ನ ನೋಡೊಕೆ ಕಳಿಸಿದ
ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು
ಸಾಮವೇದದ ಗಾನ ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು
ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ
ಪುಣ್ಯ ಉಂಡು (=ಸುಖ ಅನುಭೋಗಿಸಿ) ತೀರಿತು, ಪಾಪ ತಿಂದು (=ಕಷ್ಟ ಅನುಭವಿಸಿ) ತೀರಿತು
ಮಾಡಿದ ಕರ್ಮ ಬೆನ್ನಾಡಿ ಬಂತು
ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು
ಏನಾದರೇನು ತಾನು ತಾನಾಗದ ವರೆಗೆ
ದಾನಿಗೆ ದೀನತನ ಸಲ್ಲ, ಗ್ನಾನಿಗೆ ಮೌನ ಸಲ್ಲ
ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು
ತನ್ನ ತಾನರಿತವಗೇ ತ್ರಿಭುವನ ತನ್ನೊಳಗೆ ಕಂಡಿತ್ತು
ದೈವ ಅನ್ನೋದ ಮತ್ತೆಲ್ಲೂ ನೊಡದೆ ತಾನಿದ್ದ ಒತ್ತಿಲೇ ನೋಡು
ಪೆದ್ದ ಮರದ ತುದಿಯೇರಿ ಅಣಿತಪ್ಪಿ ಬಿದ್ದು ಸತ್ತ
ಸಿರಿ ಸೋಂಕಿದವರ ಪರಿ ಬೇರೆ
ಮಾತಿನ ಬೊಮ್ಮ ತೂತಾದ ಮಡಕೆಯ ಪರಿ
ಅರಿವಿನ ಹಾದಿ ಬೇರೆ
ಅನುಭವಿಗೆ ಬೇರೆ ಮತವಿಲ್ಲ
ಕೋಪ ಬೀವುದೇ ಸಮತೆ
ಪಾಪ ಅನ್ನೋದಕ್ಕೆ ಕೋಪವೇ ನೆಲೆಗಟ್ಟು
ಕೋಟಿ ಕೊಟ್ಟರೂ ಕೂಟ ಕರ್ಮಿಯ ದುಂದುಗವೇ ಬೇಡ
ಕೊಲ್ಲದಿರುವುದೇ ಧರ್ಮ ಬಲ್ಲವರಿಗೆ ಅದೇ ಸಮ್ಮತ
ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ
ಒಳ್ಳೇರ ಒಡನಿದ್ದು ಕಳ್ಳ ಒಳ್ಳೇನಾದ
ನಲ್ಲೆ ಮುಂದೆ ಸುಳಿದರೆ ಲೋಕದೊಳಗೆ ಒಲ್ಲದವರಾರು
ಹೆಣ್ಣಿನ ಸೊಬಗನು ಕಣ್ಣಾರೆ ಕಂಡು ಬಯಸದ ಅಣ್ಣಗಳು ಅದಾರು
ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು
ಸಜ್ಜನರ ಸಂಗ ಹೆಜ್ಜೇನು ಸವಿದಂತೆ
ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು
ಕರಣಗಳ ತಡೆದು ನಿಲಬಾರದು
ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ
ಬಹುಮನದ ಹಾದಿ ಕೈಗೊಂಡರೆ ಸುಖವಿಲ್ಲ
ನೆತ್ತಿಯಲ್ಲಿ ಅಮೃತ ಹೊತ್ತು ಸಾವಿಗಂಜಿ ಜಗವೆಲ್ಲ ಸುತ್ತಾಡಿದ
ಹೆಣ್ಣಿದ್ದ ಮನೆಗೆ ಎಡತಾಕಿ ಅಣ್ಣಯ್ಯ ಮಣ್ಣಾಗಿ ಹೋದ
ಎಲ್ಲವೂ ತಾನಗ ಬಲ್ಲರೆ ಅದುವೇ ಯೋಗ
ಕಯ್ಯಾರೆ ಮಾಡುವ ಧರ್ಮ ಲೇಸು
ಪಾತ್ರವರಿತು ಜಗದ ಜಾತ್ರೆಗೆ ಸಲ್ಲಬೇಕು
ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು
ಉಟ್ಟು ಉಡಲಾರ ಕೊಟ್ಟು ಸೈರಿಸಲಾರ
ಕೊಟ್ಟುಣ್ಣದ ಗಂಟು ಪರರಿಗೆ ಬಿಟ್ಟು ಹೋದಂತೆ
ಕೊಂದ ಪಾಪ ತಿಂದು ಪರಿಹಾರ (=ಕೊಂದ ಪಾಪ/ಕರ್ಮ ತನಗೆ ಅಂಟಿಕೊಂಡು ಅದನ್ನು ತೊಡೆಯುವುದಕ್ಕೆ ಕಷ್ಟ ಅನುಭವಿಸಬೇಕಾಗುತ್ತದೆ)
ಒಂದೊಂದು ಹನಿ ಬಿದ್ದು ನಿಂತಲ್ಲಿ ಮಡುವಾಯ್ತು
ಊರಿಗೆ ದಾರೀಯ ಯಾರು ತೋರಿದರೇನು
ಯಾರಿಗೂ ತೋರದಂತೆ ದೈವ ತನ್ನೊಳಗೆ ಸಾರಿಹುದು
ನಿಜವ ಹಿಡಿ ಘಟವ ನೆಚ್ಚದಿರು
ದಿಟವೇ ಪುಣ್ಯದ ಪುಂಜ ಸಟೆಯೇ ಪಾಪದ ಬೀಜ
ಇಮ್ಮನದಿಂದ ಸುಮ್ಮನೆ ಕೆಟ್ಟೆ (ಕೇಡು)
ಧರ್ಮದ ಹಾದಿ ತಿಳಿದವನಿಗೆ ಓದು ವಾದಗಳೇಕೆ
ಏನೂ ಇಲ್ಲದವಗೆ ಭಯವಿಲ್ಲ
ಬೆರಳು ತೋರುದ್ರೆ ಅಂಗೈನೇ ನುಂಗಿದಂತೆ
ಅಕ್ಕಿ ಉಂಡವ ಹಕ್ಕಿ, ಜೋಳ ಉಂಡವ ತೋಳ
ಅಕ್ಕಿಲ್ಲ ಬ್ಯಾಳಿಲ್ಲ ಅಕ್ಕನ್ನ ಕರತರಬೇಕು
ಅಡೆ ಮಡಕೆಯಲ್ಲ ಇಡೆ ಸಟ್ಟುಗವಲ್ಲ
ಅಣ್ಣಿಗೇರ್‍ಯಾಗ ಎಣ್ಣೆ ಮೊಣಕಾಲ ಮಟ್ಟ
ನೆರಲೆ ಹಣ್ಣು ಬಲು ಕಪ್ಪು ತಿಂದು ನೋಡಿದರೆ ಬಲು ಸವಿ
ಅತ್ತೆ ಮಾಡಿದ್ದು ಅಡಕಲಗೂಡಿಗೆ ಸೊಸೆ ಮಾಡಿದ್ದು ಬೆಳಕಿಗೆ
ಅತ್ತೆಯ ಮನಿಯಾಗ ಮುತ್ತಾಗಿ ಇರಬೇಕು
ಅಧರಕ್ಕೆ ಕಹಿ ಉದರಕ್ಕೆ ಸಿಹಿ
ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
ಅಪ್ಪನ ಬಟ್ಟೆಯಾದರು ಚಿಪ್ಪಿಗ ಬಿಡ
ಅಯ್ಯೋ ಅಂದರೆ ಅರೆ ವಯಸ್ಸು
ಅರಿತೂ ಮಾಡಿದ ಪಾಪ ವಜ್ರಲೇಪ
ಅಲಗಿನ ಗಾಯಕ್ಕಿಂತ ಗಲಗಿನ ಗಾಯ ಹೆಚ್ಚು
ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು
ಅಲಾ ಬಲಾ ಪಾಪಿ ತಲೀ ಮ್ಯಾಲೆ
ಸಿಡಿಲು ಬಡಿದರೆ ಅಂಗೈಲಿ ಹಿಡಿದ ಕೊಡೆ ಕಾಪಾಡಿತೇ
ಆಗುವ (ಅಡುವ) ವರೆಗಿದ್ದು ಆರುವ ವರೆಗೆ ಇರಲಾರರೇ
ಆಟ ಕೆಟ್ಟರೆ ದೀವಟಿಗೆಯವನ ಸುತ್ತ
ಆಡಿ ಉಂಡ ಮೈ ಅಟ್ಟು ಉಂಡೀತೇ?
ಆಡೋಣ ಬಾ ಕೆಡಿಸೋಣ ಬಾ
ಹೊತ್ತು ಕಳೆದರೆ ಮತ್ತೆ ಬಾರದು
ಹೊತ್ತಿರುವಾಗಲೇ ಗೊತ್ತು ಸೇರಬೇಕು
ಹೊಕ್ಕು ಬಳಸಿದರೆ ನಂಟು
ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ
ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ
ಹೆಣ್ಣು ಜಲ್ಮಕ್ಕೆ ಹೆಜ್ಜೆಗೊಂದು ಮುಳ್ಳು
ಹೆಣ್ಣಿನ ಬಾಳು ಕಣ್ಣೀರಿನ ಗೋಳು
ಹೆಣ್ಣು ಉರಿಸಿದ ಮನೆಯ ಹೆಗ್ಗಂಬ ಉರಿಯಿತು
ಹೆಂಡತಿಯಿಲ್ಲದ ಮನೆ ತಂತಿಯಿಲ್ಲದ ವೀಣೆ
ಹೆಂದತಿಯಿಲ್ಲದ ಮನೆ ದೇವರಿಲ್ಲದ ಗುಡಿ
ಹೂವ ತರುವ ಮನೆಗೆ ದೇವ ಹುಲ್ಲು ಹೊರುವ
ಹುಣ್ಣು ಮಾದರೂ ಕಲೆ ಮಾದೀತೇ
ಹುಚ್ಚು ಹೊಳೇ ಬರುವಾಗ ಹೂವಿನ ತೋಟ ಇದಿರೇ